ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಜೀವನ ಕೌಶಲಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ತರಬೇತುಗಾರರಾಗಿ ಸುನಿಲ್ ಪಂಡಿತ್, ಪ್ರಾಂಶುಪಾಲರು, ಎಸ್ ಡಿ ಎಂ ರೆಸಿಡೆನ್ಶಿಯಲ್ ಕಾಲೇಜ್, ಉಜಿರೆ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸಮಸ್ಯೆಗಳನ್ನು ಎದುರಿಸುವುದು, ನಿರ್ಧಾರ ತೆಗೆದುಕೊಳ್ಳುವುದು, ಸಮನ್ವಯತೆ, ಸಂವಹನ ಕೌಶಲಗಳು ಮತ್ತು ಭಾವನೆಗಳ ನಿಯಂತ್ರಣ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು.
ನಂತರ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ಮಾತನಾಡಿ ಇಂತಹ ತರಬೇತಿಗಳು ಮಕ್ಕಳಲ್ಲಿ ಹೊಸ ಹುರುಪನ್ನು ತರುತ್ತದೆ ಎಂದು ಮಕ್ಕಳಿಗೆ ಮನದಟ್ಟು ಮಾಡಿದರು. ಹತ್ತನೇ ತರಗತಿಯ ಸಿಂಧೂರ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಕುಮಾರಿ ನಿವೇದಿಯ ಸ್ವಾಗತಿಸಿ ಕುಮಾರಿ ಆಶ್ರೀತಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.













