25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಜೀವನ ಕೌಶಲಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ತರಬೇತುಗಾರರಾಗಿ ಸುನಿಲ್ ಪಂಡಿತ್, ಪ್ರಾಂಶುಪಾಲರು, ಎಸ್ ಡಿ ಎಂ ರೆಸಿಡೆನ್ಶಿಯಲ್ ಕಾಲೇಜ್, ಉಜಿರೆ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸಮಸ್ಯೆಗಳನ್ನು ಎದುರಿಸುವುದು, ನಿರ್ಧಾರ ತೆಗೆದುಕೊಳ್ಳುವುದು, ಸಮನ್ವಯತೆ, ಸಂವಹನ ಕೌಶಲಗಳು ಮತ್ತು ಭಾವನೆಗಳ ನಿಯಂತ್ರಣ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು.


ನಂತರ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ಮಾತನಾಡಿ ಇಂತಹ ತರಬೇತಿಗಳು ಮಕ್ಕಳಲ್ಲಿ ಹೊಸ ಹುರುಪನ್ನು ತರುತ್ತದೆ ಎಂದು ಮಕ್ಕಳಿಗೆ ಮನದಟ್ಟು ಮಾಡಿದರು. ಹತ್ತನೇ ತರಗತಿಯ ಸಿಂಧೂರ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಕುಮಾರಿ ನಿವೇದಿಯ ಸ್ವಾಗತಿಸಿ ಕುಮಾರಿ ಆಶ್ರೀತಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಸಿ.ಬಿ.ಎಸ್.ಇ ಶಾಲೆಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

Suddi Udaya

ಸರಕಾರಿ ಪ್ರೌಢಶಾಲೆ ನಡ: “ರಾಜ್ಯ ಮಟ್ಟದ ಹಸಿರು ನೈರ್ಮಲ್ಯ ಅಭ್ಯುದಯ ಉತ್ತಮ ಶಾಲೆ – 2024” ಪ್ರಶಸ್ತಿಗೆ ಆಯ್ಕೆ.

Suddi Udaya

ಬೆಳ್ತಂಗಡಿ ಶ್ರೀ ಧ.ಮಂ.ಆಂ.ಮಾ. ಶಾಲೆಯಲ್ಲಿ ಡಾ. ಡಿ ವೀರೇಂದ್ರ ಹೆಗ್ಗಡೆ ಯವರ ಹುಟ್ಟುಹಬ್ಬದ ಸಂಭ್ರಮ

Suddi Udaya

ಎಕ್ಸಲೆಂಟ್ ಮೂಡುಬಿದಿರೆ: ಜೆಇಇ ಅಡ್ವಾನ್ಸ್ಡ್ ರಾಷ್ಟ್ರಮಟ್ಟದ ಸಾಧನೆ

Suddi Udaya

ವಿಶ್ವ ಹಿಂದೂ ಪರಿಷತ್ ಇಂದಬೆಟ್ಟು-ನಾವೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ನಾಳೆ (ಜ.14): ಶಾಸಕ ಹರೀಶ್ ಪೂಂಜ ನೇತೃತ್ವದಲ್ಲಿ ನಾರಾವಿ ಮಹಾಶಕ್ತಿ ಕೇಂದ್ರದ ವ್ಯಾಪ್ತಿಯ ಪ.ಜಾತಿಯ ಕಾಲೋನಿಗಳಲ್ಲಿ ಸಾಮರಸ್ಯದ ಸಂಕ್ರಾಂತಿ

Suddi Udaya
error: Content is protected !!