25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇವರ ಸಹಯೋಗದೊಂದಿಗೆ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಇಂದು ಜರಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಸೀತಮ್ಮ ದೇವಿದಾಸ್ ಗೌಡ ಮಾಲ್ದಡ್ಕ ಸಹಶಿಕ್ಷಕಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಇವರು ಆಗಮಿಸಿ ವರಮಹಾಲಕ್ಷ್ಮಿ ವ್ರತದ ಮಹತ್ವ ವನ್ನು ಸಾರಿದರು.

ವೇದಿಕೆಯಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ ಗೌಡ ಮಾತನಾಡಿ ಇನ್ನು ಹೆಚ್ಚು ಕಾರ್ಯಕ್ರಮ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು. ವಿಜಯ ಗೌಡ ವೇಣೂರು ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ದಾಮೋದರ ಗೌಡ ಸುರುಳಿ ಶ್ರೀಮತಿ ಸೌಮ್ಯಲ ತ ಜಯಂತ ಗೌಡ ಗುರಿಪಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಇವರು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷೆಯಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಅಧ್ಯಕ್ಷತೆ ವಹಿಸಿ ಧನ್ಯವಾದವಿತ್ತರು. ಶ್ರೀಮತಿ ಅನುಪಮಾ ಸತೀಶ್ ಗೌಡ ಮಾಳಿಗೆಮನೆ ಕಾರ್ಯಕ್ರಮ ನಿರೂಪಿಸಿದರು.

Related posts

ಸೌತಡ್ಕ ಅಂಗನವಾಡಿಯಲ್ಲಿ ಆಟಿಕೆಗಳ ಮಧ್ಯೆ ಅಡಗಿದ್ದ ಹಾವು ಕಚ್ಚಿ 4 ವರ್ಷದ ಬಾಲಕಿ ಆಸ್ಪತ್ರೆಗೆ ದಾಖಲು

Suddi Udaya

ಪುತ್ತೂರು ವಿನ್ಸೆಂಟ್ ಪ್ರಕಾಶ್ ಪಿಂಟೋ ಹಾಗೂ ತೇರೆಸಾ ಪಿಂಟೋ ರವರಿಂದ ಮೇಲಂತಬೆಟ್ಟು ಅಂಗನವಾಡಿ ಮಕ್ಕಳಿಗೆ ಪಾದರಕ್ಷೆ ವಿತರಣೆ

Suddi Udaya

ಉಜಿರೆ ಬದ್ರಿಯಾ ಜುಮಾ ಮಸ್ಜಿದ್ ನಲ್ಲಿ ಈದ್ ಉಲ್ ಫಿತ್ರ್ ಆಚರಣೆ

Suddi Udaya

ಸೆಂಟ್ ಅಲ್ಫೋನ್ಸ ಪುಣ್ಯಕ್ಷೇತ್ರದ ನಿರ್ಗಮಿತ ಟ್ರಸ್ಟಿಗಳಿಗೆ ಬೀಳ್ಕೊಡುಗೆ

Suddi Udaya

ವೇಣೂರು: ಸಾಯಿ ಈಶ್ವರ್ ಗುರೂಜಿಯವರ ದಿವ್ಯ ಸಂಕಲ್ಪದಂತೆ ಸನಾತನ ಹಿಂದೂ ಧರ್ಮದ 300 ಹೆಣ್ಣು ಮಕ್ಕಳಿಗೆ ಉಚಿತ ಮೂಗುತಿ ಧಾರಣೆ

Suddi Udaya

ಶೇ.100 ಮತದಾನವಾದರೂ ಅಭಿವೃದ್ಧಿ ಹೊಂದದ ಬಾಂಜಾರು ಮಲೆ… ಮಾತು ತಪ್ಪಿದ ಅಧಿಕಾರಿಗಳು…???

Suddi Udaya
error: Content is protected !!