24 C
ಪುತ್ತೂರು, ಬೆಳ್ತಂಗಡಿ
June 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇವರ ಸಹಯೋಗದೊಂದಿಗೆ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಇಂದು ಜರಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಸೀತಮ್ಮ ದೇವಿದಾಸ್ ಗೌಡ ಮಾಲ್ದಡ್ಕ ಸಹಶಿಕ್ಷಕಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಇವರು ಆಗಮಿಸಿ ವರಮಹಾಲಕ್ಷ್ಮಿ ವ್ರತದ ಮಹತ್ವ ವನ್ನು ಸಾರಿದರು.

ವೇದಿಕೆಯಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ ಗೌಡ ಮಾತನಾಡಿ ಇನ್ನು ಹೆಚ್ಚು ಕಾರ್ಯಕ್ರಮ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು. ವಿಜಯ ಗೌಡ ವೇಣೂರು ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ದಾಮೋದರ ಗೌಡ ಸುರುಳಿ ಶ್ರೀಮತಿ ಸೌಮ್ಯಲ ತ ಜಯಂತ ಗೌಡ ಗುರಿಪಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಇವರು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷೆಯಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಅಧ್ಯಕ್ಷತೆ ವಹಿಸಿ ಧನ್ಯವಾದವಿತ್ತರು. ಶ್ರೀಮತಿ ಅನುಪಮಾ ಸತೀಶ್ ಗೌಡ ಮಾಳಿಗೆಮನೆ ಕಾರ್ಯಕ್ರಮ ನಿರೂಪಿಸಿದರು.

Related posts

ಬೆಳ್ತಂಗಡಿ: ತೋಟಗಾರಿಕಾ ಇಲಾಖೆಯಲ್ಲಿ ಜೇನು ಕೃಷಿ ತರಬೇತಿ-ಜೇನು ಪೆಟ್ಟಿಗೆ ವಿತರಣೆ

Suddi Udaya

ಸೆ.27-28: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya

ಮಿತ್ತಬಾಗಿಲು ಕಾಡು ಹಂದಿ ಬೇಟೆ: ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

Suddi Udaya

ಸುಲ್ಕೇರಿ ಬ್ರಹ್ಮ ಶ್ರೀ ಗುರುನಾರಾಯಣ ಸೇವಾ ಸಂಘದಿಂದ ಮನೆ ನಿರ್ಮಾಣಕ್ಕೆ ನೆರವು

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಟ ಯಶ್ ದಂಪತಿ ಭೇಟಿ: ದೇವರಿಗೆ ವಿಶೇಷ ಪೂಜೆ

Suddi Udaya
error: Content is protected !!