28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಗೌಡ ಪಿ.ರವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ಡಾ. ಈಶ್ವರ ಗೌಡ ಪಿ. ಅವರು ಬೆಂಗಳೂರು ವಿ.ವಿ .ಪುರಂನ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಈಶ್ವರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Growth and Performance of Regional Rural Banks in Karnataka” ಎಂಬ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.


ಡಾ. ಈಶ್ವರ ಗೌಡ ಪಿ.ರವರು ತಮ್ಮ ಎಂ.ಕಾಂ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, ಎಂ.ಬಿ.ಎ ಪದವಿಯನ್ನು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಮತ್ತು ತಮ್ಮ ಎಂ.ಎ ಪದವಿಯನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹಾಗೂ ತಮ್ಮ ಎಂ.ಫಿಲ್ ಪದವಿಯನ್ನು ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿರುತ್ತಾರೆ.
ಇವರು ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ವರ್ಗಾವಣೆಗೊಂಡು ಮಡಂತ್ಯಾರಿನ ಪ್ರತಿಷ್ಠಿತ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಈಶ್ವರ ಗೌಡ ಪಿ.ರವರು ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮಿತ್ತಮೂಲೆ ನಾರಾಯಣ ಗೌಡ ಹಾಗೂ ದಿ. ಮಾನಕ್ಕ ದಂಪತಿಯ ಪುತ್ರರಾಗಿದ್ದು,ಪ್ರಸ್ತುತ ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಶೇಡಿಯ ಶ್ರೀನಿಧಿಯಲ್ಲಿ ಪತ್ನಿ ಶಿಕ್ಷಕಿಯಾದ ಶ್ರೀಮತಿ ಭುವನೇಶ್ವರಿ ಪಿ.ಎಂ ಹಾಗೂ ಪುತ್ರರಾದ ನಿಧಿಶ್ ಐ.ಬಿ ಮತ್ತು ಶ್ರೇಯಸ್ ಐ.ಬಿ ಇವರೊಂದಿಗೆ ವಾಸವಾಗಿದ್ದಾರೆ.

Related posts

ಅಳದಂಗಡಿ ವಲಯದ ಭಜನಾ ಮಂಡಳಿಗಳ ಪದಾಧಿಕಾರಿಗಳ ಸಭೆ

Suddi Udaya

ಅರಸಿನಮಕ್ಕಿ ಸರಕಾರಿ ಪ್ರೌಢಶಾಲೆಯಲ್ಲಿ ಔಷಧೀಯ ಸಸ್ಯಗಳ ಮಾಹಿತಿ ಕಾರ್ಯಕ್ರಮ

Suddi Udaya

ಮಾ.26-28: ಅಳದಂಗಡಿ ಅಂಗತ್ಯಾರು ಬಾಕಿಮಾರು ಶ್ರೀ ಬ್ರಹ್ಮ ಮೊಗೇರ್ಕಳ ಗರಡಿಯಲ್ಲಿ ವಾರ್ಷಿಕ ನೇಮೋತ್ಸವ

Suddi Udaya

ಪುದುವೆಟ್ಟು: ಮಿಯಾರು ನಿವಾಸಿ ಶೇಖರ್ ಗೌಡ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಸ್ವಂತ ಮನೆಯ ಕನಸನ್ನು ನನಸಗಿಸಲು “ಡ್ರೀಮ್ ಡೀಲ್ ಗ್ರೂಪ್” ವಿಶಿಷ್ಟ ಸೇವಿಂಗ್ಸ್ ಪ್ಲಾನ್ ಯೋಜನೆ – ಕೇವಲ 1 ಸಾವಿರ ಪಾವತಿಸಿ ಮನೆ, ಕಾರು, ಬೈಕ್, ಚಿನ್ನ ಗೆಲ್ಲಿರಿ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕ- ಶಿಕ್ಷಕರ ಸಭೆ

Suddi Udaya
error: Content is protected !!