May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ: 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ: ಧಾರ್ಮಿಕ ಕಾರ್ಯಕ್ರಮ

ಅಳದಂಗಡಿ: ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಳದಂಗಡಿ ಇದರ ಆಶ್ರಯದಲ್ಲಿ, ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಡಗಕಾರಂದೂರು, ಸಾಧನಾ ಜ್ಞಾನವಿಕಾಸ ಕೇಂದ್ರ, ಜನಜಾಗೃತಿ ಗ್ರಾಮ ಸಮಿತಿ ಬಡಗಕಾರಂದೂರು, ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಬಡಗಕಾರಂದೂರು ಇವುಗಳ ಆಶ್ರಯದಲ್ಲಿ 22ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆಯು ಪ್ರಕಾಶ್ ಭಟ್ ಪೌರೋಹಿತ್ಯದಲ್ಲಿ ಆ.8 ರಂದು ಶ್ರೀ ಸೋಮನಾಥೇಶ್ವರಿ ದೇವಸ್ಥಾನದ ವಠಾರದಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ್ ಅಜಿಲರು ಧಾರ್ಮಿಕ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಜನ ಜಾಗೃತಿ ವೇದಿಕೆ ಪ್ರಾದೇಶಿಕ ಕಚೇರಿ ಉಡುಪಿ ಇದರ ಯೋಜನಾಧಿಕಾರಿ ಗಣೇಶ್ ಆಚಾರ್ಯ ಪುತ್ತೂರು ಧಾರ್ಮಿಕ ಉಪನ್ಯಾಸವನ್ನು ನೆರವೇರಿಸಿದರು.

ವೇದಿಕೆಯಲ್ಲಿ ಅಳದಂಗಡಿ ಶ್ರೀ ಕ್ಲಿನಿಕ್ ನ ಡಾ। ಎನ್.ಎಮ್. ತುಳುಪುಳೆ, ಅಳದಂಗಡಿ ಗ್ರಾ.ಪಂ. ಅಧ್ಯಕ್ಷೆ ಶ್ರೀಮತಿ ಸರಸ್ವತಿ, ಜನಜಾಗೃತಿ ವೇದಿಕೆ ತಾಲೂಕು ಸದಸ್ಯ ಸದಾನಂದ ಪೂಜಾರಿ, ಉಂಗಿಲಬೈಲು, ‘ಎ’ ಒಕ್ಕೂಟದ ಅಧ್ಯಕ್ಷ ಹರೀಶ್ ಸಾಲಿಯಾನ್, ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷೆ ಶ್ರೀಮತಿ ರೇಖಾ ರಾಜಶೇಖರ್ ಶೆಟ್ಟಿ, ಅಳದಂಗಡಿ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಯಶೋಧರ ಸುವರ್ಣ, ಅಳದಂಗಡಿ ಶ್ರೀ ಸೋಮನಾಥೇಶ್ವರಿ ಭಜನಾ ಮಂಡಳಿ ಅಧ್ಯಕ್ಷ ಪ್ರಭಾಕರ ಪೂಜಾರಿ ಕೊಡಂಗೆ, ವಲಯ ಮೇಲ್ವಿಚಾರಕಿ ಶ್ರೀಮತಿ ಯಶೋದ ಎಂ., ‘ಎ’ ಒಕ್ಕೂಟದ ಸೇವಾ ಪ್ರತಿನಿಧಿ ಶ್ರೀಮತಿ ಶುಭ ಹರೀಶ್ ರೈ ಉಪಸ್ಥಿತರಿದ್ದರು.

‘ಎ’ ಒಕ್ಕೂಟದ ನಿಕಟಪೂರ್ವ ಅಧ್ಯಕ್ಷ ಮಂಜುನಾಥ ಆಚಾರ್ಯ ಅಳದಂಗಡಿ ಸ್ವಾಗತಿಸಿದರು. ಮನೋಹರ ಪ್ರಸಾದ್ ನಿರೂಪಿಸಿದರು. ‘ಬಿ’ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ ವಂದಿಸಿದರು.

Related posts

ಬೆಳ್ತಂಗಡಿ: ಮೇ 30 ರಂದು 11ಕೆವಿ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಮುಳಿಯ ಸಂಸ್ಥೆಯ ದಿಗ್ದರ್ಶಕರಾದ ಸುಲೋಚನಾ ಶ್ಯಾಮ್ ಭಟ್ ಮುಳಿಯ ನಿಧನ : ಮುಳಿಯ ಗೋಲ್ಡ್ & ಡೈಮಂಡ್ ಸಂಸ್ಥೆಯ ಎಲ್ಲಾ ಶಾಖೆಗಳಿಗೆ ಆ. 29 ರಂದು ರಜೆ

Suddi Udaya

ಸವಣಾಲು ಶ್ರೀ ಭೈರವ ಕ್ಷೇತ್ರಕ್ಕೆ ನೂತನ ಶಿಲಾಮಯ ಗಭ೯ಗುಡಿಯ ಶಿಲೆಗಳ ಮೆರವಣಿಗೆ

Suddi Udaya

ಧರ್ಮಸ್ಥಳ ಬುರುಡೆ ಪ್ರಕರಣ: ಚಿನ್ನಯ್ಯನಿಗೆ ಜೀವ ಬೆದರಿಕೆ ಹಿನ್ನೆಲೆ ರಕ್ಷಣೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ

Suddi Udaya

ಡಿ.1: ಯುವವಾಹಿನಿ ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ ಡೆನ್ನಾನ ಡೆನ್ನನ- 2024

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya
error: Content is protected !!