September 6, 2026
Uncategorized

ಧರ್ಮಸ್ಥಳ ಬೊಳಿಯಾರ್‌ನ 15ನೇ ಸ್ಥಳದಲ್ಲಿ ಪತ್ತೆಯಾಗದ ಶವದ ಅವಶೇಷಗಳು

ಬೆಳ್ತಂಗಡಿ : ಹಲವಾರು ಮೃತದೇಹ ಹೂತು ಹಾಕಿದ ಪ್ರಕರಣ ಸಂಬಂಧ ಎಸ್.ಐ.ಟಿ ತಂಡ ಆ.8 ರಂದು ಶುಕ್ರವಾರ ಧಮ೯ಸ್ಥಳ ಗ್ರಾಮದ ಬೊಳಿಯಾರ್ ಎಂಬಲ್ಲಿ 15 ನೇ ಸ್ಥಳದಲ್ಲಿ ಶವದ ಅವಶೇಷಗಳ ಶೋಧ ಕಾರ್ಯವನ್ನು ನಡೆಸಿದ್ದು, ಶವದ ಯಾವುದೇ ಅವಶೇಷಗಳು ಪತ್ತೆಯಾಗಿಲ್ಲ ಎಂಬ ಮಾಹಿತಿ ಲಭ್ಯವಾಗಿದೆ.
ಧರ್ಮಸ್ಥಳ ಗ್ರಾಮದ ಬೊಳಿಯಾರ್ ಸಮೀಪಕ್ಕೆ ಆ.8 ರಂದು ಅನಾಮಿಕ ದೂರುದಾರನೊಂದಿಗೆ ಎಸ್.ಐ.ಟಿ ತಂಡ ಆಗಮಿಸಿದೆ. ಕಳೆದ ಎರಡು ವಾರಗಳಿಂದ ನೇತ್ರಾವತಿ ಸ್ನಾನಘಟ್ಟದ ಸಮೀಪ ದೂರು ದಾರ ತೋರಿಸಿದ ಜಾಗದಲ್ಲಿ ಅಗೆಯುವ ಪ್ರಕ್ರಿಯೆ ನಡೆಸಲಾಗಿತ್ತು. ಆ.8ರಂದು ನೇತ್ರಾವತಿ ಸ್ನಾನ ಘಟ್ಟದ ಬಳಿ ಡ್ಯಾಮನ ಬಳಿಯ 13ನೇ ಸ್ಥಳದಲ್ಲಿ ಉತ್ಖನನ ಕಾರ್ಯ ನಡೆಸಬಹುದೆಂದು ನಿರೀಕ್ಷಿಸಲಾಗಿತ್ತು.
ಆದರೆ ಇಂದು ಬೆಳಿಗ್ಗೆ ದೂರುದಾರನ ಜೊತೆ ಎಸ್ ಐಟಿ ತಂಡ ಮಧ್ಯಾಹ್ನದ ಸಮಯ ಧರ್ಮಸ್ಥಳ ಬಳಿಯ ಬೋಳಿಯಾರ್ ಎಂಬಲ್ಲಿಗೆ ಬಂದಿದ್ದು, ಅಲ್ಲಿ ಕಾಡಿನೊಳಗೆ ದೂರುದಾರನ ಜೊತೆ ತೆರಳಿ ಅಲ್ಲಿ ಅನಾಮಿಕ ದೂರುದಾರ ಗುರುತಿಸಿದ ಸ್ಥಳದಲ್ಲಿ ಯಾವುದೇ ಶವದ ಕಳೆಬರಹಗಳು ಪತ್ತೆಯಾಗಿಲ್ಲ ಎಂದು ಮಾಹಿತಿ ಲಭ್ಯವಾಗಿದೆ. ಎಸ್‌ಐಟಿ ತಂಡ ಕಾರ್ಯಾಚರಣೆಯನ್ನು ಕೊನೆಗೊಳಿಸಿ ಹಿಂದಿರುಗಿದೆ.

Related posts

ವೇಣೂರು: ಶ್ರೀ ಜೈನ ದಿಗಂಬರ ತೀರ್ಥಕ್ಷೇತ್ರ ಸಮಿತಿ ಮಾಜಿ ಕಾರ್ಯದರ್ಶಿ, ಮಾರಗುತ್ತು ಯಂ. ವಿಜಯರಾಜ ಅಧಿಕಾರಿ ನಿಧನ

Suddi Udaya

ಗುರುವಾಯನಕೆರೆಯಲ್ಲಿ ಅಪರಿಚಿತ ಗಂಡಸಿನ ಶವ ಪತ್ತೆ

Suddi Udaya

ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನಕ್ಕೆ ಪ್ರಶಾಂತ್ ಶೆಟ್ಟಿ ನೀನಾಸಂ ಭೇಟಿ

Suddi Udaya

ಧರ್ಮಸ್ಥಳ ಕನ್ಯಾಡಿಯಲ್ಲಿ ಸಿಡಿಲು ಬಡಿದು ದನ ಸಾವು

Suddi Udaya

ಬಂದಾರು ಗ್ರಾ.ಪಂ. ದ್ವಿತೀಯ ಹಂತದ ಗ್ರಾಮ ಸಭೆ

Suddi Udaya

ಮಚ್ಚಿನ : ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳ ಪೋಷಕರ ಸಭೆ

Suddi Udaya
error: Content is protected !!