25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ವಾರ್ಷಿಕ ಮಹಾಸಭೆ

ಬಳಂಜ: ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ಬಳಂಜ ಇದರ ವಾರ್ಷಿಕ ಮಹಾಸಭೆಯು ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಇವರ ಅಧ್ಯಕ್ಷತೆಯಲ್ಲಿ ಆ. 3 ರಂದು ಸಂಘದ ಸಭಾ ಭವನದಲ್ಲಿ ನಡೆಯಿತು.

2024-25 ಸಾಲಿನ ವಾರ್ಷಿಕ ವರದಿಯನ್ನು ಪ್ರಧಾನ ಕಾರ್ಯದರ್ಶಿ ಜಗದೀಶ್ ಪೂಜಾರಿ ಸಭೆಗೆ ಮಂಡಿಸಿದರು.ಕೋಶಾಧಿಕಾರಿ ಪ್ರವೀಣ್ ಕುಮಾರ್ ಹೆಚ್.ಎಸ್ ವಾರ್ಷಿಕ ಲೆಕ್ಕಪತ್ರ ಮಂಡನೆ ಮಾಡಿದರು. 2025-26 ನೇ ಸಾಲಿನ ಬಜೆಟ್ ಮಂಡನೆ ಮಾಡಲಾಯಿತು.

ಸಂಘದ ಅಧ್ಯಕ್ಷ ಸಂತೋಷ್ ಪಿ ಕೋಟ್ಯಾನ್ ಮಾತನಾಡಿ ಸಂಘವು ಕಳೆದ 46 ವರ್ಷಗಳ ಪರಂಪರೆ ಹೊಂದಿದ್ದು ಹಲವಾರು ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ.ಇಗಾಗಲೇ ಸಂಘದ ಸಭಾ ಭವನಕ್ಕೆ ಅತೀ ಅಗತ್ಯವಾಗಿ ಬೇಕಾಗಿರುವ ಅಡುಗೆ ಕೋಣೆಯ ಕೆಲಸ ಪ್ರಗತಿಯಲ್ಲಿದೆ.ಸಂಘದ ಆಡಳಿತ ಮಂಡಳಿ ಹಾಗೂ ಯುವ ಬಿಲ್ಲವ ವೇದಿಮೆ,ಮಹಿಳಾ ಬಿಲ್ಲವ ವೇದಿಕೆ ಹಾಗೂ ಸದಸ್ಯರ ಸಹಕಾರದಿಂದ ಇನ್ನಷ್ಟು ಕೆಲಸ ಕಾರ್ಯಕ್ರಮಗಳು ನಡೆಯಲಿ ಎಂದರು.

ಮಹಾಸಭೆಯಲ್ಲಿ ಸಂಘದ ಉಪಾಧ್ಯಕ್ಷ ಕೃಷ್ಣಪ್ಪ ಪೂಜಾರಿ, ನಿರ್ದೇಶಕರಾದ ಸಂತೋಷ್ ಕುಮಾರ್, ದಿನೇಶ್ ಅಂತರ, ಜಗದೀಶ್ ತಾರಿಪಡ್ಪು,ಯತೀಶ್ ವೈ‌ಎಲ್,ರಂಜಿತ್ ಪೂಜಾರಿ ಮಜಲಡ್ಡ,ಪ್ರವೀಣ್ ಡಿ ಕೋಟ್ಯಾನ್,ಪ್ರದೀಪ್ ಮೈಂದಕುಮೇರ್,ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಶರತ್ ಅಂಚನ್,ಮಹಿಳಾ ಬಿಲ್ಲವ ವೇದಿಕೆ ಅಧ್ಯಕ್ಷೆ ಭಾರತಿ ಸಂತೋಷ್ ಉಪಸ್ಥಿತರಿದ್ದರು.

ಸಂಘದ ಸರ್ವ ಸದಸ್ಯರು ಉಪಸ್ಥಿತರಿದ್ದರು. ಪ್ರವೀಣ್ ಕುಮಾರ್ ಹೆಚ್.ಎಸ್ ಸ್ವಾಗತಿಸಿ, ವಂದಿಸಿದರು.

ನೂತನ‌ ಸಮಿತಿ ರಚನೆ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ರಿ ಬಳಂಜ ಇದರ 2025-27 ನೆರ ಸಾಲಿನ ನೂತನ‌ ಸಮಿತಿಯನ್ನು ರಚನೆ ಮಾಡಲಾಯಿತು. ಸಮಿತಿಗೆ 18 ಜನರ ಆಡಳಿತ ಮಂಡಳಿಯನ್ನು ರಚಿಸಲಾಯಿತು.ಅಧ್ಯಕ್ಷರಾಗಿ ಸಂತೋಷ್ ಪಿ ಕೋಟ್ಯಾನ್ ಎರಡನೇ ಅವಧಿಗೆ ಪುನರಾಯ್ಕೆಯಾದರು.ಉಪಾಧ್ಯಕ್ಷರಾಗಿ ಕೃಷ್ಣಪ್ಪ ಪೂಜಾರಿ ಬೊಂಟ್ರೋಟ್ಟುಗುತ್ತು, ಪ್ರಧಾನ ಕಾರ್ಯದರ್ಶಿ ರಂಜಿತ್ ಪೂಜಾರಿ,ಕೋಶಾಧಿಕಾರಿಯಾಗಿ ಪ್ರವೀಣ್ ಕುಮಾರ್ ಹೆಚ್.ಎಸ್,ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಪೂಜಾರಿ ನಿಟ್ಟಡ್ಕ ಹಾಗೂ ನಿರ್ದೇಶಕರನ್ನು ಆಯ್ಕೆಗೊಳಿಸಲಾಯಿತು.

Related posts

ಬೆಳ್ತಂಗಡಿ ಹಿರಿಯ ಶ್ರೇಣಿ ನ್ಯಾಯಾಲಯದ ಅಪರ ಸರ್ಕಾರಿ ವಕೀಲರಾಗಿರುವ ಮನೋಹರ ಕುಮಾರ್ ರಿಗೆ ಹೆಚ್ಚುವರಿ ಹೊಣೆ ಹೊರಿಸಿ ಸರಕಾರ ಆದೇಶ

Suddi Udaya

ಶ್ರೀ ಧ. ಮಂ. ಆಂ.ಮಾ. ಶಾಲೆಯಲ್ಲಿ ಸನ್ ರೈಸ್ ಡೇ ಹಾಗೂ ಸ್ಕಾಪ್೯ ಡೇ

Suddi Udaya

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಮದ್ದಡ್ಕ :12 ನೇ ವರ್ಷದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಎ.16-21: ಬೆಳ್ತಂಗಡಿ ಮಹಿಳಾ ವೃಂದದ ಆಶ್ರಯದಲ್ಲಿ ಝೇಂಕಾರ ಬೇಸಿಗೆ ಶಿಬಿರ

Suddi Udaya

ಗೇರುಕಟ್ಟೆ ಹಾಲು ಉತ್ಪಾದಕರ ಸಹಕಾರಿ ಸಂಘ ಅಧ್ಯಕ್ಷರಾಗಿ ಜನಾರ್ದನ ಗೌಡ ಕೆ, ಉಪಾಧ್ಯಕ್ಷರಾಗಿ ಸಿರಿಲ್ ಪಿಂಟೋ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸೇವಾ ಪ್ರತಿಷ್ಠಾನದ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಪಡೆದ ಎಂಎಸ್ ದೇವಿಗೆ ಅಭಿನಂದನೆ

Suddi Udaya
error: Content is protected !!