25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇವರ ಸಹಯೋಗದೊಂದಿಗೆ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಇಂದು ಜರಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಸೀತಮ್ಮ ದೇವಿದಾಸ್ ಗೌಡ ಮಾಲ್ದಡ್ಕ ಸಹಶಿಕ್ಷಕಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಇವರು ಆಗಮಿಸಿ ವರಮಹಾಲಕ್ಷ್ಮಿ ವ್ರತದ ಮಹತ್ವ ವನ್ನು ಸಾರಿದರು.

ವೇದಿಕೆಯಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ ಗೌಡ ಮಾತನಾಡಿ ಇನ್ನು ಹೆಚ್ಚು ಕಾರ್ಯಕ್ರಮ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು. ವಿಜಯ ಗೌಡ ವೇಣೂರು ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ದಾಮೋದರ ಗೌಡ ಸುರುಳಿ ಶ್ರೀಮತಿ ಸೌಮ್ಯಲ ತ ಜಯಂತ ಗೌಡ ಗುರಿಪಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಇವರು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷೆಯಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಅಧ್ಯಕ್ಷತೆ ವಹಿಸಿ ಧನ್ಯವಾದವಿತ್ತರು. ಶ್ರೀಮತಿ ಅನುಪಮಾ ಸತೀಶ್ ಗೌಡ ಮಾಳಿಗೆಮನೆ ಕಾರ್ಯಕ್ರಮ ನಿರೂಪಿಸಿದರು.

Related posts

ದಯಾ ವಿಶೇಷ ಶಾಲೆಯಲ್ಲಿ ಶ್ರವಣ ಮೌಲ್ಯಮಾಪನ ಮತ್ತು ಶ್ರವಣ ಸಾಧನ ಪ್ರೋಗ್ರಾಮಿಂಗ್ ಕಾರ್ಯಕ್ರಮ

Suddi Udaya

ಉಜಿರೆ ಪೆರ್ಲ ಪ್ರಹ್ಲಾದ ನಗರದಿಂದ ಕಾಣೆಯಾದ ಪಿ.ಕೆ ಕೃಷ್ಣಪ್ಪರ ಪತ್ತೆಗೆ ಪೊಲೀಸರ ಮನವಿ

Suddi Udaya

ಮರೋಡಿ: ಗ್ರಾ.ಪಂ ಮಾಜಿ ಸದಸ್ಯ ರವಿರಾಜ್ ಬಳ್ಳಾಲ್ ಕಾಂಗ್ರೇಸ್ ಸೇರ್ಪಡೆ

Suddi Udaya

ಎಸ್.ಐ‌.ಟಿ ಮುಖ್ಯಸ್ಥ ಪ್ರಣವ್ ಮೊಹಂತಿ ಬೆಳ್ತಂಗಡಿ ಕಚೇರಿಗೆ ಆಗಮನ

Suddi Udaya

ಗೋಳಿಯಂಗಡಿ ಮಿನ್ಹಾಜುಲ್ ಹುದಾ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಚಿತ ವಿವಾಹ ಕಾರ್ಯಕ್ರಮ

Suddi Udaya

ಸಿಡಿಲು ಮಳೆ: ಶಿಶಿಲ ರವಿ ರವರ ಮನೆಗೆ ಅಪಾರ ಹಾನಿ

Suddi Udaya
error: Content is protected !!