28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ರಾಷ್ಟ್ರಧ್ವಜಕ್ಕೆ ಅಪಮಾನ ಮಾಡುವುದನ್ನು ತಡೆಯಲು ಕಾನೂನು ಕ್ರಮ ಕೈಗೊಳ್ಳುವ ಬಗ್ಗೆ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿ

ಬೆಳ್ತಂಗಡಿ: ರಾಷ್ಟ್ರಧ್ವಜವೇ ರಾಷ್ಟ್ರದ ಆತ್ಮವಾಗಿದೆ. ಈ ರಾಷ್ಟ್ರೀಯ ಧ್ವಜಗಳನ್ನು ಅಗಸ್ಟ್ 15 ಮತ್ತು 26 ಜನವರಿಯಂದು ಪ್ರದರ್ಶಿಸಲಾಗುತ್ತದೆ. ಆದರೆ ಅದೇ ದಿನ ಅದೇ ರಾಷ್ಟ್ರಧ್ವಜ ರಸ್ತೆ ಹಾಗೂ ಚರಂಡಿಗಳಲ್ಲಿ ಹರಿದ ಸ್ಥಿತಿಯಲ್ಲಿ ಬಿದ್ದಿರುವುದು ಕಂಡು ಬರುತ್ತದೆ. ಇದು ನಾವು ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ . ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ಮಾರಾಟ ಮಾಡುವುದು ಕಾನೂನು ಪ್ರಕಾರ ಅಪರಾಧವಾಗಿದೆ. ಇದು ಲಾಂಛನಗಳು ಮತ್ತು ಹೆಸರುಗಳ ಕಾಯಿದೆ 1950′ ಮತ್ತು ರಾಷ್ಟ್ರೀಯ ಗೌರವಕ್ಕೆ ಅವಮಾನಗಳ ತಡೆ ಕಾಯಿದೆ 1971′ ಉಲ್ಲಂಘನೆಯಾಗಿದೆ. ಸಮಿತಿಯು ಹಲವು ವರ್ಷಗಳಿಂದ ರಾಷ್ಟ್ರಧ್ವಜಕ್ಕೆ ಅವಮಾನಿಸುವುದರ ವಿರುದ್ಧ ಜನಜಾಗೃತಿ ಮೂಡಿಸುತ್ತಿದೆ.

ಈ ನಿಟ್ಟಿನಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಮಾಡುವುದನ್ನು ತಡೆಯಲು ರಾಷ್ಟ್ರಧ್ವಜ ಗೌರವ ಕೃತಿ ಸಮಿತಿಯನ್ನು ಸ್ಥಾಪಿಸಬೇಕೆಂದು ತಹಶೀಲ್ದಾರಾದ ಪೃಥ್ವಿ ಸಾನಿಕಂ ರವರಿಗೂ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದರೆ ಕೂಡಲೇ ಸಂಬಂಧಪಟ್ಟವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಬೆಳ್ತಂಗಡಿ ಪೊಲೀಸ್ ಠಾಣಾ ಅಧಿಕಾರಿ ಸುಬ್ಬಾಪುರ ಮಠ ರವರಿಗೂ ಹಾಗೂ ಶಾಲೆಗಳಲ್ಲಿ ರಾಷ್ಟ್ರಧ್ವಜವನ್ನು ಗೌರವಿಸಿ ಎಂಬ ಉಪಕ್ರಮವನ್ನು ನಡೆಸಲು ತಾಲೂಕು ಶಿಕ್ಷಣ ಅಧಿಕಾರಿ ಶ್ರೀಮತಿ ತಾರಕೇಸರಿ ರವರಿಗೂ ಮನವಿಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಉದಯ ಬಿ.ಕೆ ವಕೀಲರು, ಉಮೇಶ್ ಬಂಗೇರ ಕಾರ್ಯದರ್ಶಿಗಳು ಶ್ರೀ ದೇವಿ ಮಹಾಮ್ಮಾಯಿ ಭಜನಾ ಮಂದಿರ ಪಿಲ್ಯ, ಅಕ್ಷಯ್ ಟಿ.ರಾವ್ ವಕೀಲರು ,ಯೋಗೀಶ್ ಕೆಂಬರ್ಜೆ, ಹರ್ಷಿತ್ ವಕೀಲರು ಬೆಳ್ತಂಗಡಿ, ಹರೀಶ್ ಮುದ್ದಿನಡ್ಕ ಉಪಸ್ಥಿತರಿದ್ದರು.

Related posts

ಜೆಸಿಐ ವಲಯ-15ರ ಅಭಿವೃದ್ಧಿ ಮತ್ತು ಬೆಳವಣಿಗೆ ಹಾಗೂ ವ್ಯವಹಾರ ಸಮ್ಮೇಳನದಲ್ಲಿ ಸಂತೋಷ್ ಪಿ ಕೋಟ್ಯಾನ್ ಬಳಂಜ ರವರಿಗೆ ಪ್ರತಿಷ್ಠಿತ “ಸಾಧನಾಶ್ರೀ ಪುರಸ್ಕಾರ”

Suddi Udaya

ಪ್ರಜಾಪ್ರಭುತ್ವದ ದೊಡ್ಡ ಹಬ್ಬದಲ್ಲಿ ಸಂಭ್ರಮಸಿದ ಬಳಂಜ- ನಾಲ್ಕೂರಿನ ಮತದಾರರು ಬಿರುಸಿನ ಮತದಾನ, ಬೆಳಿಗ್ಗೆಯಿಂದ ಸರತಿ ಸಾಲಿನಲ್ಲಿ ನಿಂತು ಹಕ್ಕು ಚಲಾವಣೆ

Suddi Udaya

ಕುಕ್ಕೇಡಿ ಗ್ರಾಮ ಪಂಚಾಯತ್ ವತಿಯಿಂದ ಅಂಗನವಾಡಿಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಭೂಸೇನೆಯಲ್ಲಿ 22 ವರ್ಷ ಕರ್ತವ್ಯ ಸಲ್ಲಿಸಿದ್ದ ಸೋಮಂತಡ್ಕ ನಿವಾಸಿ ಫ್ರಾನ್ಸಿಸ್ ಜೆ. ನಿವೃತ್ತಿ‌

Suddi Udaya

ಪಡಂಗಡಿ ಹಾಗೂ ಕನ್ನಡಿಕಟ್ಟೆ ಒಕ್ಕೂಟಗಳ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ

Suddi Udaya

ಮೇ. 5-9: ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!