28 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜಿನ ಸಹಪ್ರಾಧ್ಯಾಪಕ ಈಶ್ವರ ಗೌಡ ಪಿ. ಅವರಿಗೆ ಪಿ. ಎಚ್.ಡಿ ಪದವಿ ಪ್ರದಾನ

ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರು ಇಲ್ಲಿನ ವಾಣಿಜ್ಯಶಾಸ್ತ್ರ ವಿಭಾಗದ ಸಹಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿರುವ ಈಶ್ವರ ಗೌಡ ಪಿ.ರವರಿಗೆ ಆಂಧ್ರಪ್ರದೇಶದ ಕುಪ್ಪಂನ ದ್ರಾವಿಡಿಯನ್ ವಿಶ್ವವಿದ್ಯಾನಿಲಯವು ಡಾಕ್ಟರೇಟ್ ಪದವಿ ನೀಡಿದೆ. ಡಾ. ಈಶ್ವರ ಗೌಡ ಪಿ. ಅವರು ಬೆಂಗಳೂರು ವಿ.ವಿ .ಪುರಂನ ಸಂಧ್ಯಾ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಡಾ.ಈಶ್ವರ್ ರೆಡ್ಡಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ “Growth and Performance of Regional Rural Banks in Karnataka” ಎಂಬ ಮಹಾ ಪ್ರಬಂಧಕ್ಕೆ ಡಾಕ್ಟರೇಟ್ ಪದವಿ ನೀಡಲಾಗಿದೆ.


ಡಾ. ಈಶ್ವರ ಗೌಡ ಪಿ.ರವರು ತಮ್ಮ ಎಂ.ಕಾಂ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ, ಎಂ.ಬಿ.ಎ ಪದವಿಯನ್ನು ಮೈಸೂರು ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದಲ್ಲಿ ಮತ್ತು ತಮ್ಮ ಎಂ.ಎ ಪದವಿಯನ್ನು ಧಾರವಾಡದ ಕರ್ನಾಟಕ ವಿಶ್ವವಿದ್ಯಾನಿಲಯದಲ್ಲಿ ಹಾಗೂ ತಮ್ಮ ಎಂ.ಫಿಲ್ ಪದವಿಯನ್ನು ತಿರುಪತಿಯ ಶ್ರೀ ವೆಂಕಟೇಶ್ವರ ವಿಶ್ವವಿದ್ಯಾನಿಲಯದಿಂದ ಪಡೆದುಕೊಂಡಿರುತ್ತಾರೆ.
ಇವರು ಪುತ್ತೂರಿನ ಪ್ರತಿಷ್ಠಿತ ಸಂತ ಫಿಲೋಮಿನಾ ಕಾಲೇಜಿನಲ್ಲಿ ಏಳು ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ವರ್ಗಾವಣೆಗೊಂಡು ಮಡಂತ್ಯಾರಿನ ಪ್ರತಿಷ್ಠಿತ ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ 21 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಡಾ. ಈಶ್ವರ ಗೌಡ ಪಿ.ರವರು ಬಂಟ್ವಾಳ ತಾಲೂಕಿನ ವಿಟ್ಲಪಡ್ನೂರು ಗ್ರಾಮದ ಪೂರ್ಲಪ್ಪಾಡಿ ಮಿತ್ತಮೂಲೆ ನಾರಾಯಣ ಗೌಡ ಹಾಗೂ ದಿ. ಮಾನಕ್ಕ ದಂಪತಿಯ ಪುತ್ರರಾಗಿದ್ದು,ಪ್ರಸ್ತುತ ಕಡಬ ತಾಲೂಕಿನ ಕುಂತೂರು ಪೆರಾಬೆ ಗ್ರಾಮದ ಶೇಡಿಯ ಶ್ರೀನಿಧಿಯಲ್ಲಿ ಪತ್ನಿ ಶಿಕ್ಷಕಿಯಾದ ಶ್ರೀಮತಿ ಭುವನೇಶ್ವರಿ ಪಿ.ಎಂ ಹಾಗೂ ಪುತ್ರರಾದ ನಿಧಿಶ್ ಐ.ಬಿ ಮತ್ತು ಶ್ರೇಯಸ್ ಐ.ಬಿ ಇವರೊಂದಿಗೆ ವಾಸವಾಗಿದ್ದಾರೆ.

Related posts

ಬೆಳ್ತಂಗಡಿ: ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಯೋಜನಾ ಪುಸ್ತಕ ಬಿಡುಗಡೆ

Suddi Udaya

ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧದ ಅಪಪ್ರಚಾರ ಖಂಡಿಸಿ ಸೂಕ್ತ ಕ್ರಮಕ್ಕೆ ಬೆಳ್ತಂಗಡಿ ತಾಲೂಕು ನಾಗರಿಕ ಹಿತರಕ್ಷಣಾ ವೇದಿಕೆಯಿಂದ ತಹಶೀಲ್ದಾರ್, ವಿಶೇಷ ತನಿಖಾದಳಕ್ಕೆ, ಬೆಳ್ತಂಗಡಿ ಠಾಣಾಧಿಕಾರಿಗಳಿಗೆ ಮನವಿ ಸಲ್ಲಿಕೆ

Suddi Udaya

ಬೆಳ್ತಂಗಡಿ ತಾಲೂಕಿನಾದ್ಯಂತ ನಡೆದ 35 ಕ್ಕೂ ಹೆಚ್ಚು ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಭೇಟಿ ನೀಡಿ ಶ್ರೀ ದೇವರ ಆಶೀರ್ವಾದ ಪಡೆದ ಶಾಸಕ ಹರೀಶ್ ಪೂಂಜ

Suddi Udaya

ತೆಕ್ಕಾರು ಗ್ರಾ.ಪಂ. ನಿಂದ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರಿಗೆ ಹಾಗೂ ಅವಲಂಬಿತರಿಗೆ ಆರೋಗ್ಯ ತಪಾಸಣಾ ಶಿಬಿರ

Suddi Udaya

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ : ಶಾಸಕ ಹರೀಶ್ ಪೂಂಜರಿಂದ ರಾಜ್ಯ ಮಟ್ಟದ ವಸ್ತು ಪ್ರದರ್ಶನ ಉದ್ಘಾಟನೆ

Suddi Udaya

ಬೆಳ್ತಂಗಡಿ ಯುವ ವಕೀಲರ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!