25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜೀವನ ಕೌಶಲ್ಯ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಜೀವನ ಕೌಶಲಗಳ ತರಬೇತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಮುಖ್ಯ ತರಬೇತುಗಾರರಾಗಿ ಸುನಿಲ್ ಪಂಡಿತ್, ಪ್ರಾಂಶುಪಾಲರು, ಎಸ್ ಡಿ ಎಂ ರೆಸಿಡೆನ್ಶಿಯಲ್ ಕಾಲೇಜ್, ಉಜಿರೆ ಇವರು ಮುಖ್ಯ ಅತಿಥಿಗಳಾಗಿ ಆಗಮಿಸಿ ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು ವಿದ್ಯಾರ್ಥಿಗಳಿಗೆ ಸಮಸ್ಯೆಗಳನ್ನು ಎದುರಿಸುವುದು, ನಿರ್ಧಾರ ತೆಗೆದುಕೊಳ್ಳುವುದು, ಸಮನ್ವಯತೆ, ಸಂವಹನ ಕೌಶಲಗಳು ಮತ್ತು ಭಾವನೆಗಳ ನಿಯಂತ್ರಣ ಮುಂತಾದ ವಿಷಯಗಳ ಬಗ್ಗೆ ವಿವರಣೆ ನೀಡಲಾಯಿತು.


ನಂತರ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪರಿಮಳ ಎಂ ವಿ ಯವರು ಮಾತನಾಡಿ ಇಂತಹ ತರಬೇತಿಗಳು ಮಕ್ಕಳಲ್ಲಿ ಹೊಸ ಹುರುಪನ್ನು ತರುತ್ತದೆ ಎಂದು ಮಕ್ಕಳಿಗೆ ಮನದಟ್ಟು ಮಾಡಿದರು. ಹತ್ತನೇ ತರಗತಿಯ ಸಿಂಧೂರ ನಿರ್ವಹಿಸಿದ ಕಾರ್ಯಕ್ರಮದಲ್ಲಿ, ಕುಮಾರಿ ನಿವೇದಿಯ ಸ್ವಾಗತಿಸಿ ಕುಮಾರಿ ಆಶ್ರೀತಾ ಧನ್ಯವಾದ ಸಲ್ಲಿಸಿದರು. ಕಾರ್ಯಕ್ರಮದಲ್ಲಿ ಹತ್ತನೇ ತರಗತಿ ವಿದ್ಯಾರ್ಥಿಗಳು, ಅಧ್ಯಾಪಕರು ಭಾಗವಹಿಸಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಬಗ್ಗೆ ನಡೆಯುತ್ತಿರುವ ಅಪಪ್ರಚಾರಗಳಿಗೆ ಕೊನೆಹಾಡುವಂತೆ ಸದನದಲ್ಲಿ ಶಾಸಕ ಹರೀಶ್ ಪೂಂಜ ಆಗ್ರಹ

Suddi Udaya

ಅರಸಿನಮಕ್ಕಿ ಶಿವಾನಿ ಸಂಜೀವಿನಿ ಒಕ್ಕೂಟದಲ್ಲಿ ಮೇಣದ ಬತ್ತಿ ಹಾಗೂ ದೀಪದ ಬತ್ತಿ ಮಾಡುವ ಪ್ರಾತ್ಯಕ್ಷಿಕೆ

Suddi Udaya

ಧರ್ಮಸ್ಥಳ: ಸಂತಾನಪ್ರದ ನಾಗಕ್ಷೇತ್ರದಲ್ಲಿ ಶ್ರೀ ನಾಗದೇವರ ಬಿಂಬ ಹಾಗೂ ನಾಗರಕ್ತೇಶ್ವರಿ ಪ್ರತಿಷ್ಠೆ ದೈವಗಳ ಪುನರ್ ಪ್ರತಿಷ್ಠೆ ಮಹೋತ್ಸವ: ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅ.ಹಿ.ಪ್ರಾ. ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

Suddi Udaya

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya

ಮೇ 20: ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಪ್ರಮಾಣವಚನ ಸ್ವೀಕಾರ: ಅಳದಂಗಡಿಯಲ್ಲಿ ರೋಡ್ ಶೋ, ವಿಜಯೋತ್ಸವ- ಸಂದೀಪ್ ನೀರಲ್ಕೆ

Suddi Udaya
error: Content is protected !!