25.1 C
ಪುತ್ತೂರು, ಬೆಳ್ತಂಗಡಿ
August 5, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇವರ ಸಹಯೋಗದೊಂದಿಗೆ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಇಂದು ಜರಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಸೀತಮ್ಮ ದೇವಿದಾಸ್ ಗೌಡ ಮಾಲ್ದಡ್ಕ ಸಹಶಿಕ್ಷಕಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಇವರು ಆಗಮಿಸಿ ವರಮಹಾಲಕ್ಷ್ಮಿ ವ್ರತದ ಮಹತ್ವ ವನ್ನು ಸಾರಿದರು.

ವೇದಿಕೆಯಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ ಗೌಡ ಮಾತನಾಡಿ ಇನ್ನು ಹೆಚ್ಚು ಕಾರ್ಯಕ್ರಮ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು. ವಿಜಯ ಗೌಡ ವೇಣೂರು ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ದಾಮೋದರ ಗೌಡ ಸುರುಳಿ ಶ್ರೀಮತಿ ಸೌಮ್ಯಲ ತ ಜಯಂತ ಗೌಡ ಗುರಿಪಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಇವರು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷೆಯಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಅಧ್ಯಕ್ಷತೆ ವಹಿಸಿ ಧನ್ಯವಾದವಿತ್ತರು. ಶ್ರೀಮತಿ ಅನುಪಮಾ ಸತೀಶ್ ಗೌಡ ಮಾಳಿಗೆಮನೆ ಕಾರ್ಯಕ್ರಮ ನಿರೂಪಿಸಿದರು.

Related posts

ಲಾಯಿಲ: ಮಾನಸಿಕ ಖಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಸಾವು

Suddi Udaya

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಸಂಸ್ಕೃತೋತ್ಸವ

Suddi Udaya

ಧರ್ಮಸ್ಥಳ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ಶಾಲಾ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಹತ್ಯಡ್ಕ: ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಉಜಿರೆ: ಧರ್ಮಜಾಗೃತಿ ಸಮಿತಿಯ ಪ್ರಧಾನ ಸಂಚಾಲಕರಾಗಿ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಆಯ್ಕೆ

Suddi Udaya
error: Content is protected !!