26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆ

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಮಹಿಳಾ ವೇದಿಕೆಯ ನೇತೃತ್ವದಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ (ನಿ ) ಉಜಿರೆ ಹಾಗೂ ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸಂಘ (ರಿ ) ಉಜಿರೆ ಇವರ ಸಹಯೋಗದೊಂದಿಗೆ 4 ನೇ ವರ್ಷದ ವರಮಹಾಲಕ್ಷ್ಮೀ ವ್ರತ ಪೂಜೆಯು ಎಸ್. ಪಿ ಆಯಿಲ್ ಮಿಲ್ ವಠಾರದಲ್ಲಿ ಇಂದು ಜರಗಿತು.

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಶ್ರೀಮತಿ ಸೀತಮ್ಮ ದೇವಿದಾಸ್ ಗೌಡ ಮಾಲ್ದಡ್ಕ ಸಹಶಿಕ್ಷಕಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆ ಚಾರ್ಮಾಡಿ ಇವರು ಆಗಮಿಸಿ ವರಮಹಾಲಕ್ಷ್ಮಿ ವ್ರತದ ಮಹತ್ವ ವನ್ನು ಸಾರಿದರು.

ವೇದಿಕೆಯಲ್ಲಿ ಶ್ರೀ ಕಾಲಭೈರವೇಶ್ವರ ಒಕ್ಕಲಿಗ ಗೌಡರ ಕ್ರೆಡಿಟ್ ಸೌಹಾರ್ದ ಸಹಕಾರಿ ಉಜಿರೆ ಇದರ ಅಧ್ಯಕ್ಷ ರಂಜನ್ ಜಿ ಗೌಡ ಮಾತನಾಡಿ ಇನ್ನು ಹೆಚ್ಚು ಕಾರ್ಯಕ್ರಮ ಮಾಡುವ ಶಕ್ತಿ ನೀಡಲಿ ಎಂದು ಹಾರೈಸಿದರು. ವಿಜಯ ಗೌಡ ವೇಣೂರು ಮಾತನಾಡಿ ಶುಭ ಹಾರೈಸಿದರು. ವೇದಿಕೆಯಲ್ಲಿ ದಾಮೋದರ ಗೌಡ ಸುರುಳಿ ಶ್ರೀಮತಿ ಸೌಮ್ಯಲ ತ ಜಯಂತ ಗೌಡ ಗುರಿಪಳ್ಳ ಉಪಸ್ಥಿತರಿದ್ದರು.

ಕಾರ್ಯಕ್ರಮವನ್ನು ಶ್ರೀಮತಿ ಗೀತಾ ಚಿದಾನಂದ ಗೌಡ ಬಡೆಕೊಟ್ಟು ಇವರು ಸ್ವಾಗತಿಸಿ, ಬೆಳ್ತಂಗಡಿ ತಾಲೂಕು ಮಹಿಳಾ ವೇದಿಕೆಯ ಅಧ್ಯಕ್ಷೆಯಾದ ಶ್ರೀಮತಿ ಅಪರ್ಣ ಶಿವಕಾಂತ ಗೌಡ ಅಧ್ಯಕ್ಷತೆ ವಹಿಸಿ ಧನ್ಯವಾದವಿತ್ತರು. ಶ್ರೀಮತಿ ಅನುಪಮಾ ಸತೀಶ್ ಗೌಡ ಮಾಳಿಗೆಮನೆ ಕಾರ್ಯಕ್ರಮ ನಿರೂಪಿಸಿದರು.

Related posts

ಮಡಂತ್ಯಾರು: ಹೊಂಡಗಳಿಂದ ಹದಗೆಟ್ಟ ರಸ್ತೆ: ಬಿಎಂಎಸ್ ರಿಕ್ಷಾ ಚಾಲಕರಿಂದ ಹೊಂಡ ಮುಚ್ಚುವ ಕಾರ್ಯ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಸಂಜಯ್ ಗ್ಲೋಬಲ್ ಫೌಂಡೇಶನ್ ಬೆಳ್ತಂಗಡಿ ವತಿಯಿಂದ ಸ್ವಾತಂತ್ರ್ಯ ದಿನಾಚರಣೆ ಆಚರಣೆ

Suddi Udaya

ನಾಳ ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಸೇವೆಯಾಟ ಪ್ರಾರಂಭದ ಸಭಾ ಕಾರ್ಯಕ್ರಮ

Suddi Udaya

ಪಿಲಿಚಾಮುಂಡಿಕಲ್ಲು ದೊಂಪದಬಲಿ ಉತ್ಸವ ಸಮಿತಿಯ ನಿಕಟಪೂರ್ವ ಉಪಾಧ್ಯಕ್ಷ ವಿಶ್ವನಾಥ ಕೋಟ್ಯಾನ್ ನಿಧನ

Suddi Udaya

ಅನುಗ್ರಹ ಟ್ರೈನಿಂಗ್ ಕಾಲೇಜು ಡಿಪ್ಲೋಮಾ ಫ್ಯಾಶನ್ ಡಿಸೈನಿಂಗ್ ವಿದ್ಯಾರ್ಥಿಗಳಿಂದ ಬೆಳ್ತಂಗಡಿಯ ನೂರಾ ಗೋಲ್ಡ್‌ಗೆ ಭೇಟಿ

Suddi Udaya
error: Content is protected !!