May 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ನೂತನ ಕಟ್ಟಡ ನಿರ್ಮಾಣಕ್ಕೆ ಹಿಂದೂ ಧಾರ್ಮಿಕ ಸೇವಾ ಸಮಿತಿ, ಕನ್ಯಾಡಿ ಯವರಿಂದ ರೂ. 25 ಸಾವಿರ ದೇಣಿಗೆ

ಕನ್ಯಾಡಿ : ಕನ್ಯಾಡಿಯ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಸದಸ್ಯರು ಕನ್ಯಾಡಿ ಸೇವಾನಿಕೇತನಕ್ಕೆ ಆ. 8 ರಂದು ಭೇಟಿ ನೀಡಿ. ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕೆ ರೂ. 25,000/- ದ ಚೆಕ್ ನೀಡಿ ಕಟ್ಟಡದ ನಿರ್ಮಾಣ ಶೀಘ್ರವಾಗಿ ನೆರವೇರುವಂತೆ ಶುಭಹಾರೈಸಿದರು.

ಸಂಸ್ಥೆಯ ಸಂಸ್ಥಾಪಕ ಕೆ ವಿನಾಯಕರಾವ್ ರವರು ಸಂಸ್ಥೆಯ ಪರವಾಗಿ ದೇಣಿಗೆಯನ್ನು ಸ್ವೀಕರಿಸಿ ಧನ್ಯವಾದವಿತ್ತರು.

ಈ ಸಂದರ್ಭದಲ್ಲಿ ಕನ್ಯಾಡಿ ಹಿಂದೂ ಧಾರ್ಮಿಕ ಸೇವಾ ಸಮಿತಿಯ ಅಧ್ಯಕ್ಷ ರಾಜೇಶ್ ಪಿ, ಕಾರ್ಯದರ್ಶಿ ಗಣೇಶ್ ಬಜಿಲ, ಉಪಾಧ್ಯಕ್ಷ ಅರುಣ್ ನಾಯ್ಕ್, ಸಂಯೋಜಕ ರಾಘವ ಕುರ್ಮಾಣಿ, ಸಹಕಾರ್ಯದರ್ಶಿ ವಿದ್ಯಾಧರ್ ರೈ, ಗಣೇಶೋತ್ಸವ ಸಮಿತಿ ಅಧ್ಯಕ್ಷ ಚೇತನ್ ಗುಡಿಗಾರ್, ಉಪಾಧ್ಯಕ್ಷ ಗೋವಿಂದ ಸುವರ್ಣ ಪೊಂಗರು, ಸದಸ್ಯ ಮಹಾಬಲ ನಾಯ್ಕ ಮತ್ತು ಉಮೇಶ ಆಚಾರ್ಯ ಉಪಸ್ಥಿತರಿದ್ದರು.

Related posts

ಮೇ 15: ವಿದ್ಯುತ್ ನಿಲುಗಡೆ

Suddi Udaya

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya

ಕಾರು-ಕೆಎಸ್ಸಾರ್ಟಿಸಿ ಬಸ್ ನಡುವೆ ಭೀಕರ ಅಪಘಾತ: ಮೂವರು ಸ್ಥಳದಲ್ಲೇ ಮೃತ್ಯು

Suddi Udaya

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಗಿ ಅಬ್ದುಲ್ ರಝಾಕ್ ಹಾಗೂ ಉಪಾಧ್ಯಕ್ಷರಾಗಿ ಶೇಖರ ಪೂಜಾರಿ

Suddi Udaya

ಖೋ ಖೋ ಪಂದ್ಯಾಟ : ನಯನಾಡು ಸರಕಾರಿ‌ ಪ್ರೌಢಶಾಲೆಯ ಬಾಲಕರ ತಂಡ ಪ್ರಥಮ ಸ್ಥಾನ ಹಾಗೂ ಬಾಲಕಿಯರ ತಂಡ ದ್ವಿತೀಯ ಸ್ಥಾನ

Suddi Udaya
error: Content is protected !!