23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಉಜಿರೆ : ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು.

ತುಳುನಾಡಿನ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, ಆಹಾರ, ಆರೋಗ್ಯವನ್ನು ಆಟಿ ದಿನಗಳಲ್ಲಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತುಳು ನಾಡಿಗೆ ಹಾಗೂ ತುಳು ಭಾಷೆಗೆ ಸಂಬಂಧಪಟ್ಟಂತಹ ಹಾಡು, ಗಾದೆ, ಸಂಧಿ ಪಾಡ್ದನ, ನೃತ್ಯ, ಭಿತ್ತಿ ಪತ್ರಿಕೆ, ಆಟಿ ತಿಂಗಳಿನ ತಿನಿಸುಗಳ ಪ್ರದರ್ಶನವನ್ನು ಹಾಗೂ ದೇಸಿ ಆಟಗಳನ್ನು ಸಹ ಏರ್ಪಡಿಸಲಾಗಿತ್ತು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿಗಳಾದ ಆರ್ಯಮನ್ ಹಾಗೂ ತ್ರಿಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪೃಥ್ವಿ ವಂದಿಸಿದರು.

Related posts

ಧರ್ಮಸ್ಥಳ ಮೇಳದ ಹಿರಿಯ ಯಕ್ಷಗಾನ ಕಲಾವಿದ ಕುಂಬ್ಳೆ ಶ್ರೀಧರ ರಾವ್ ಹೃದಯಾಘಾತದಿಂದ ನಿಧನ

Suddi Udaya

ಕೊಕ್ಕಡ ಕೇಸರಿ ಗೆಳೆಯರ ಬಳಗದ ವತಿಯಿಂದ ಅಯೋಧ್ಯ ಟ್ರೋಫಿ: ಅಯೋಧ್ಯ ಕರಸೇವಕರಿಗೆ ಸನ್ಮಾನ

Suddi Udaya

ಬೆಳ್ತಂಗಡಿ: ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಮಂಜೂಷ ಗ್ಲಾಸ್ & ಪ್ಲೈವುಡ್ಸ್ ಸಂಸ್ಥೆಯ ಶುಭಾರಂಭ

Suddi Udaya

ಬಾರ್ಯ ಕನಸು ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ನ್ಯಾಯತರ್ಪು: ಕೊರೆಜಂಡ ಮನೆಗೆ ಸಿಡಿಲು ಬಡಿದು ಬಿರುಕು ಬಿಟ್ಟ ಗೋಡೆ,ಕಿತ್ತು ಹೋದ ವಿದ್ಯುತ್ ವಯರಿಂಗ್

Suddi Udaya

ಬೆಳ್ತಂಗಡಿ ತಾಲೂಕು ಬಿಎಂಎಸ್ ರಿಕ್ಷಾ ಚಾಲಕರ ಸಂಘದ ಮಹಾಸಭೆ

Suddi Udaya
error: Content is protected !!