March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

ಉರುವಾಲು: 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಕಿಮಾರು ಇಲ್ಲಿ ನಡೆಯಿತು.

ಬೆಳಗ್ಗೆ ವರಮಹಾಲಕ್ಷ್ಮಿ ಕಲಶ ಪ್ರತಿಷ್ಠೆ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಕಿಮಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ವರಮಹಾಲಕ್ಷ್ಮಿ ಪೂಜೆ ಮಾಡುವುದು ನಮ್ಮೆಲ್ಲರಲ್ಲಿ ಒಂದು ಒಗ್ಗಟ್ಟಿನ ಭಾವನೆ ಬರುತ್ತದೆ.ಮನಸ್ಸಿಗೆ ಶಾಂತಿ, ನೆಮ್ಮದಿ, ಆರೋಗ್ಯ ಕೂಡ ‌ಹೆಚ್ಚಾಗುತ್ತದೆ, ಧಾರ್ಮಿಕತೆ ಹಾಗೂ ಸಂಸ್ಕೃತಿ ಬೆಳೆಯುತ್ತಿದೆ. ವರ್ಷಂಪ್ರತಿ ನಡೆಯುವ ಈ ಪೂಜೆಯನ್ನು ನಿಲ್ಲಿಸದೇ ಪ್ರತಿ ವರ್ಷ ಮಾಡುತ್ತಾ ಬರಬೇಕು ಎಂದು ಕಾರ್ಯಕ್ರಮದ ಧಾರ್ಮಿಕ ಭಾಷಣಕಾರರಾಗಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿಷ್ಣು ಪ್ರದೀಪ್ ನಿಡ್ಡಾಜೆ ಹೇಳಿದರು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗಿರಿಜ ಉದ್ಯ, ವಹಿಸಿದ್ದರು.ಇದೇ ಸಂದರ್ಭದಲ್ಲಿ ಉಪನ್ಯಾಸಕ ವಿಷ್ಣು ಪ್ರದೀಪ್ ನಿಡ್ಡಾಜೆ, ಪ್ರಗತಿಪರ ಕೃಷಿಕರಾದ ದಾಸಪ್ಪ ಗೌಡ ಕೋಡಿಯಡ್ಕ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯೆ ಶ್ರೀಮತಿ ಶಶಿಪ್ರಭಾ ಪೆದಮಲೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಉಮಾವತಿ, ವಿಘ್ನೇಶ್ವರ ಭಜನಾ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ನೀನಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷಹೇಮಂತ ಸಿ‌ ಚೆಂಡೆತ್ತಿಮಾರು ಉಪಸ್ಥಿತರಿದ್ದರು.

ಯಶ್ವಿ‌ ಮತ್ತು ಪಲ್ಲವಿ ಪ್ರಾರ್ಥಿಸಿ, ದಿನೇಶ ನಾಯ್ಕ ನೀನಿ ಸ್ವಾಗತಿಸಿ, ಪ್ರದೀಪ್ ನಾಯ್ಕ ಆನಡ್ಕ ನಿರೂಪಿಸಿ , ತೇಜಸ್ವಿನಿ ಕೋಡಿ ಧನ್ಯವಾದವಿತ್ತರು. ವರಮಹಾಲಕ್ಷ್ಮೀ ಪೂಜೆಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ-ಉಜಿರೆ ನ್ಯೂ ಸಿಟಿ ಎಲೆಕ್ಟ್ರಾನಿಕ್ಸ್‌ನಲ್ಲಿ ದೀಪಾವಳಿ ಪ್ರಯುಕ್ತ ಶೇ.40 ರಷ್ಟು ಡಿಸ್ಕೌಂಟ್ ಸೇಲ್

Suddi Udaya

ತುಳು ಶಿವಳ್ಳಿ ಸಭಾ ಕುವೆಟ್ಟು ವಲಯದಿಂದ ಶಿವರಾತ್ರಿ ಭಜನೆ

Suddi Udaya

ಧರ್ಮಸ್ಥಳ: ನಮ್ಮೂರು ನಮ್ಮ ಕೆರೆ ಸಮಿತಿ ಸದಸ್ಯರೊಂದಿಗೆ ಸಂವಾದ ಹಾಗೂ ಮಾರ್ಗದರ್ಶನ ಕಾರ್ಯಕ್ರಮ

Suddi Udaya

ಜಿಲ್ಲಾ ವಖ್ಫ್ ಕಾರ್ಯಾಲಯದ ವತಿಯಿಂದ ಉಮಿದ್ ಪೋರ್ಟಲ್ ಬಗ್ಗೆ ಮಾಹಿತಿ ಕಾರ್ಯಾಗಾರ

Suddi Udaya

ನಡ: ಪಣಿಕ್ಕಲ ನಿವಾಸಿ ಧರ್ಣಪ್ಪ ಪೂಜಾರಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಲಾಯಿಲ ದಯಾ ವಿಶೇಷ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
error: Content is protected !!