23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಗೇರುಕಟ್ಟೆಯಲ್ಲಿ ತಡರಾತ್ರಿ ತ್ಯಾಜ್ಯ ಎಸೆದವನಿಗೆ ಬಿತ್ತು ದಂಡ: ಪಂ.ಸದಸ್ಯರ, ಅಭಿವೃದ್ಧಿ ಅಧಿಕಾರಿ ಮತ್ತು ಮಾಜಿ ಅಧ್ಯಕ್ಷರ ತಡರಾತ್ರಿ ಕಾರ್ಯಾಚರಣೆ

ಬೆಳ್ತಂಗಡಿ : ಕಳಿಯ ಗ್ರಾಮ ಪಂಚಾಯತ್ ನ ಗೇರುಕಟ್ಟೆ ಪೇಟೆಯ ರಸ್ತೆ ಬದಿಯ ಎಲ್ಲೆಂದರಲ್ಲಿ ರಾತ್ರಿ ತ್ಯಾಜ್ಯ ತಂದು ಹಾಕುತ್ತಿದ್ದರು.

ಗ್ರಾಮಸ್ಥರಿಗೆ ಇದರಿಂದ ತುಂಬಾ ತೊಂದರೆ ಆಗುತ್ತಿದ್ದು, ಪಂಚಾಯತ್ ನ ವಾರ್ಡ್ ಸಭೆ ಗ್ರಾಮ ಸಭೆಗಳಲ್ಲಿ ಗ್ರಾಮಸ್ಥರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸುತ್ತಿದ್ದರು. ಇತ್ತೀಚಿನ ಗ್ರಾಮ ಪಂಚಾಯತ್ ಸಾಮಾನ್ಯ ಸಭೆಯಲ್ಲಿ ಸದಸ್ಯರು ಒಮ್ಮತದ ತೀರ್ಮಾನ ಕೈಗೊಂಡು ಹಾಕಿದ ತ್ಯಾಜ್ಯವನ್ನು ಸ್ವಚ್ಛಗೊಳಿಸಿ 2 ದಿನಗಳಿಗೆ ಮೊದಲು ಸಿ.ಸಿ.ಟಿ.ವಿ ಅಳವಡಿಸಿ ದಂಡ ಹಾಕುವ ಫಲಕ ಹಾಕಿದ್ದರು.

ನಿನ್ನೆ ತಡರಾತ್ರಿ ಬೇರೆ ಗ್ರಾಮದ ಹೋಟೆಲ್ ಒಂದರಿಂದ ತಾಜ್ಯ ತಂದು ಬಿಸಾಡಲು ಬಂದಾಗ ತಡರಾತ್ರಿ ಪಿ ಡಿ ಓ ಸಿಸಿಟಿವಿ ನೋಡುತ್ತಿದ್ದರು ಅದಾಗಲೇ ನಾಳಕ್ಕೆ ರಸ್ತೆಯಾಗಿ ಹೋಗುತ್ತಿದ್ದ ಪಂ ಮಾಜಿ ಅಧ್ಯಕ್ಷ ಕೇಶವ ಪೂಜಾರಿ ನೋಡಿ ತ್ಯಾಜ್ಯ ಹಾಕುತ್ತಿದ್ದವನನ್ನು ದ್ವಿಚಕ್ರ ವಾಹನ ಸಮೇತ ಹಿಡಿದಿಟ್ಟು ಸದಸ್ಯರ ಗಮನಕ್ಕೆ ತಂದರು. ತಡರಾತ್ರಿ ತಕ್ಷಣ ಪಿ ಡಿ ಓ, ಪಂಚಾಯತ್ ಸದಸ್ಯರಾದ ಲತೀಪ್ ಪರಿಮರವರು ಇನ್ನೋರ್ವ ಸದಸ್ಯರಾದ ಅಬ್ದುಲ್ ಕರೀಮ್ ಗೆ ಮಾಹಿತಿ ನೀಡಿ ಸ್ಥಳೀಯರ ಸಹಕಾರದಿಂದ ಹಾಗೂ ಮಾಜಿ ಪಂ ಅಧ್ಯಕ್ಷರು ಹಿಡಿದು ನಿಲ್ಲಿಸಿ ತಾಜ್ಯ ಬಿಸಾಡಲು ಬಂದವರಿಗೆ ಸ್ಥಳದಲ್ಲಿಯೇ ಮೂರು ಸಾವಿರ ರೂಪಾಯಿ ದಂಡ ವಿಧಿಸಿ ಎಚ್ಚರಿಕೆ ನೀಡಲಾಯಿತು.

Related posts

ಮಾ.7: ಡಿಪಿ ಸ್ಫೋರ್ಟ್ಸ್ ಕ್ಲಬ್‌ ಬೆಳಾಲು ಇದರ ಆಶ್ರಯದಲ್ಲಿ ತಾಲೂಕು ಮಟ್ಟದ ಹೊನಲು ಬೆಳಕಿನ ಪುರುಷರ ವಲಯ ಮಟ್ಟದ ಹಾಗೂ ಲೀಗ್‌ ಮಾದರಿಯ ವಾಲಿಬಾಲ್ ಪಂದ್ಯಾಟ

Suddi Udaya

ಮಂಗಳೂರು ಕೃಷಿಕರ ಸಹಕಾರಿ ಸಂಘದ ನಿರ್ದೇಶಕರಾಗಿ ಬಾಲಕೃಷ್ಣ ಗೌಡ ಕೇರಿಮಾರು ಆಯ್ಕೆ

Suddi Udaya

ಬೆಳ್ತಂಗಡಿ ಪಟ್ಟಣ ಪಂಚಾಯತ್ ಹಾಗೂ ಗ್ರಾಮ ಪಂಚಾಯತ್ ಪೌರ ಕಾರ್ಮಿಕರ ಜಂಟಿ ಸಮಾವೇಶ

Suddi Udaya

ಉಜಿರೆ ಶ್ರೀ ಧ.ಮಂ. ಕಾಲೇಜಿನ ಸಮಾಜ ಕಾರ್ಯ ವಿಭಾಗ ಹಾಗೂ ಸುಲ್ಕೇರಿ ಒಕ್ಕೂಟದ ಸಹಯೋಗದಿಂದ ಜಲಸಂರಕ್ಷಣೆಯ ಅರಿವು ಕಾರ್ಯಕ್ರಮ

Suddi Udaya

ಬೆಳ್ತಂಗಡಿ ಸರಕಾರಿ ಸಮುದಾಯ ಆಸ್ಪತ್ರೆಗೆ ಆರೋಗ್ಯ ರಕ್ಷಾ ಸಮಿತಿ ಭೇಟಿ: ಡೆಂಗ್ಯೂ ಹೆಚ್ಚಾಗುತ್ತಿರುವ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ವೈದ್ಯಾಧಿಕಾರಿ ಜೊತೆ ಸಭೆ

Suddi Udaya

ಒಕ್ಕಲೆಬ್ಬಿಸಿದ ಕ್ರಮಕ್ಕೆ ಬೆಳ್ತಂಗಡಿಯ ಕರ್ನಾಟಕ ಸೀರೋ ಮಲಬಾರ್ ಕೆಥೋಲಿಕ್ ಅಸೋಸಿಯೇಷನ್ ನಿಂದ ಖಂಡನೆ

Suddi Udaya
error: Content is protected !!