July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗುರುವಾಯನಕೆರೆ : ಆ. 09ರಂದು ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳು ಸೇರಿ ಪಾಂಡುರಂಗ ನಾಗರಿಕ ಸೇವಾ ಪ್ರತಿಷ್ಠಾನದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು.

ನಮ್ಮ ಮನೆ ಶಾಖೆಯ ಶಿಕ್ಷಕರಾದ ಶಿವಕುಮಾರ್ ರವರು ಅಣ್ಣ – ತಂಗಿಯರ ಬಾಂಧವ್ಯವನ್ನು ಪೌರಾಣಿಕವಾಗಿ ನಡೆದ ಘಟನೆಗಳ ಕಥೆಗಳ ಮೂಲಕ ಸ ವಿಸ್ತಾರ ವಾಗಿ ತಿಳಿಸುವುದರೊಂದಿಗೆ ರಕ್ಷಾಬಂಧನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಎಲ್ಲಾ ಅಣ್ಣ ಅಕ್ಕಂದಿರಿಗೆ ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು.


ಪಾಂಡುರಂಗ ಶಾಖೆಯ ಶಿಕ್ಷಕರಾದ ದಯಾನಂದರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಎಲ್ಲಾ ಅಣ್ಣಂದಿರು ಹಾಗೂ ಅಕ್ಕಂದಿರು ಹರ್ಷೋಲ್ಲಾಸದಿಂದ ಪರಸ್ಪರ ರಕ್ಷಾಬಂಧನವನ್ನು ಕಟ್ಟುತ್ತಾ ಸಿಹಿ ತಿಂಡಿಯನ್ನು ಹಂಚುತ್ತಾ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.


ಎರಡು ಶಾಖೆಯಿಂದ ಸುಮಾರು 75 ಯೋಗ ಬಂಧುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಮಡಂತ್ಯಾರು: ಹೆದ್ದಾರಿಯ ರಸ್ತೆ ಕಾಮಗಾರಿ ಕಳಪೆ: ಸಾರ್ವಜನಿಕರ ಆಕ್ರೋಶ

Suddi Udaya

ಮಡಂತ್ಯಾರು: ಸಾಲುಮರ ಬಳಿ ನೀರಿನ ಟ್ಯಾಂಕರ್ ಹಾಗೂ ಬೈಕ್ ನಡುವೆ ಅಪಘಾತ

Suddi Udaya

ಮಚ್ಚಿನ: ಪಾಲಡ್ಕ- ಪಲ್ಲೆಕೋಡಿ ರಸ್ತೆ ಕೆಸರುಮಯ; ಓಡಾಟ ಶೋಚನೀಯ

Suddi Udaya

ಶಿಶಿಲ ಸ.ಉ. ಹಿ.ಪ್ರಾ. ಶಾಲೆಯ ನೂತನ ಕಟ್ಟಡದ ಕಾಮಗಾರಿ ಬಗ್ಗೆ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಬದುಕು ಕಟ್ಟೋಣ ತಂಡದಿಂದ ಸಮಾಲೋಚನಾ ಸಭೆ

Suddi Udaya

ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಸಿರಿ ಕೇಂದ್ರ ಕಛೇರಿಗೆ ಭೇಟಿ

Suddi Udaya

ಯುವತಿಯರೊಂದಿಗೆ ಅನುಚಿತ ವರ್ತನೆ ಪ್ರಕರಣ: ಮೂವರು ಆರೋಪಿಗಳಿಗೆ ನ್ಯಾಯಾಂಗ ಬಂಧನ

Suddi Udaya
error: Content is protected !!