September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗುರುವಾಯನಕೆರೆ : ಆ. 09ರಂದು ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳು ಸೇರಿ ಪಾಂಡುರಂಗ ನಾಗರಿಕ ಸೇವಾ ಪ್ರತಿಷ್ಠಾನದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು.

ನಮ್ಮ ಮನೆ ಶಾಖೆಯ ಶಿಕ್ಷಕರಾದ ಶಿವಕುಮಾರ್ ರವರು ಅಣ್ಣ – ತಂಗಿಯರ ಬಾಂಧವ್ಯವನ್ನು ಪೌರಾಣಿಕವಾಗಿ ನಡೆದ ಘಟನೆಗಳ ಕಥೆಗಳ ಮೂಲಕ ಸ ವಿಸ್ತಾರ ವಾಗಿ ತಿಳಿಸುವುದರೊಂದಿಗೆ ರಕ್ಷಾಬಂಧನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಎಲ್ಲಾ ಅಣ್ಣ ಅಕ್ಕಂದಿರಿಗೆ ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು.


ಪಾಂಡುರಂಗ ಶಾಖೆಯ ಶಿಕ್ಷಕರಾದ ದಯಾನಂದರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಎಲ್ಲಾ ಅಣ್ಣಂದಿರು ಹಾಗೂ ಅಕ್ಕಂದಿರು ಹರ್ಷೋಲ್ಲಾಸದಿಂದ ಪರಸ್ಪರ ರಕ್ಷಾಬಂಧನವನ್ನು ಕಟ್ಟುತ್ತಾ ಸಿಹಿ ತಿಂಡಿಯನ್ನು ಹಂಚುತ್ತಾ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.


ಎರಡು ಶಾಖೆಯಿಂದ ಸುಮಾರು 75 ಯೋಗ ಬಂಧುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಗೆಳೆಯರ ಬಳಗ ಅಕ್ಷಯನಗರ ಸದಸ್ಯರಿಂದ ಶ್ರಮದಾನ

Suddi Udaya

ಬೆಳ್ತಂಗಡಿ ಗುರುದೇವ ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಜೇಮ್ಸ್ ಪಟ್ಟೇರಿಲ್ ರವರಿಗೆ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಅಭಿನಂದನೆ

Suddi Udaya

ಲಾಯಿಲ ಶ್ರೀ ವಿಶ್ವಕರ್ಮಾಭ್ಯುದಯ ಸಭಾ ಹಾಗೂ ಶ್ರೀ ಗಾಯತ್ರಿ ವಿಶ್ವಕರ್ಮ ಮಹಿಳಾ ಸಂಘದಿಂದ ನೂತನ ಸಂಸದ ಕ್ಯಾ| ಬ್ರಿಜೇಶ್ ಚೌಟ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದ ಮಹಿಳೆಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ಸುಮಾರು ರೂ. 12.90 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya
error: Content is protected !!