22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ಶಾಸಕ ಹರೀಶ್ ಪೂಂಜ ಹಾಗೂ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಕುಸಿತಗೊಂಡಿದ್ದ ಮನೆಯನ್ನು ವೀಕ್ಷಿಸಿದರು.

ಮನೆಯ ಕೂದಲೆಳೆಯ ಅಂತರದಲ್ಲೇ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಕಂಪ್ರೆಸರ್ ಹಾಗೂ ಬ್ರೇಕರ್ ಮೂಲಕ ಕಪ್ಪು ಕಲ್ಲು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ಹಾಗೂ ವೈಬ್ರೇಟರ್ ಒತ್ತಡಕ್ಕೆ ಕಳೆದ ಒಂದು ವರುಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಮೂಡಿದ್ದು ಈ ಬಗ್ಗೆ ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರಕ್ಕೆ ಮನೆಯವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆಯೇ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಬಂಟ್ವಾಳ: ಯುವತಿಯ ಹತ್ಯೆ ಪ್ರಕರಣ ಶಾಸಕ ಹರೀಶ್ ಪೂಂಜ ಖಂಡನೆ

Suddi Udaya

ಲಾರಿ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೆಳ್ತಂಗಡಿ ಮುರ ನಿವಾಸಿ ಬೈಕ್ ಸವಾರ ಗಂಭೀರ, ಬೈಕ್ ನಲ್ಲಿದ್ದ ಪುಟ್ಟ ಮಗು ಸ್ಥಳದಲ್ಲೇ ಮೃತ್ಯು

Suddi Udaya

ಮಡಂತ್ಯಾರು: ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದಿಂದ ಮಳೆಗಾಲದ ಠೇವಣಿ ಹಾಗೂ ಚಿನ್ನಾಭರಣ ಸಾಲಕ್ಕೆ ಹೊಸ ಆಫರ್ ಬಿಡುಗಡೆಯ ಕರಪತ್ರ ಬಿಡುಗಡೆ

Suddi Udaya

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಚುನಾವಣೆ: ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ

Suddi Udaya

ಉಜಿರೆ ಯು.ಎಸ್. ಅಟೋ ಚಾಲಕರ-ಮಾಲಕರ ಸಂಘದ ವತಿಯಿಂದ 78ನೇ ಸ್ವಾತಂತ್ರ್ಯ ದಿನಾಚರಣೆ

Suddi Udaya
error: Content is protected !!