23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

ನೆಲ್ಯಾಡಿ: ಶ್ರೀರಾಮ ವಿದ್ಯಾಲಯ, ಶ್ರೀರಾಮ ಶಿಶು ಮಂದಿರ ನೆಲ್ಯಾಡಿ, ಚಾಮುಂಡೇಶ್ವರಿ ಭಜನಾ ಮಂಡಳಿ, ದೋಂತಿಲ ಮತ್ತು ಮಾತೃ ಮಂಡಳಿ ನೆಲ್ಯಾಡಿ ಆಶ್ರಯದಲ್ಲಿ ನೆಲ್ಯಾಡಿಯ ಸೂರ್ಯನಗರದ ಶ್ರೀರಾಮ ವಿದ್ಯಾಲಯದಲ್ಲಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ವೃತ ಕಾರ್ಯಕ್ರಮ ಆ.8 ರಂದು ನಡೆಯಿತು.

ಬೆಳ್ತಂಗಡಿಯ ಧಾರ್ಮಿಕ ಮುಖಂಡ,ಬೆಂಗಳೂರು ಉದ್ಯಮಿ, ದಾನಿ ಕಿರಣ್ ಚಂದ್ರ ಡಿ ಪುಷ್ಪಗಿರಿ ಹಾಗೂ ಅವರ ಧರ್ಮಪತ್ನಿ ತಾರಾ ಕಿರಣ್ ಚಂದ್ರ ಡಿ ಪುಷ್ಪಗಿರಿ ಉರುವಾಲು ಇವರು ಪ್ರಸಾದ ರೂಪದಲ್ಲಿ ವರಮಹಾಲಕ್ಷ್ಮೀ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಸೀರೆ ದಾನ ಮಾಡಿ ಶುಭ ಕೋರಿದರು.

ವರಮಹಾಲಕ್ಷ್ಮೀ ವೃತ ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವತ್ತು ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಪುತ್ತೂರಿನ ವಿವೇಕಾನಂದ ಕಾಲೇಜಿನ ಪ್ರಾಧ್ಯಾಪಕಿ ಡಾ | ಗೀತಾ ಕುಮಾರಿ ಟಿ. ಧಾರ್ಮಿಕ ಉಪನ್ಯಾಸ ನೀಡಿದರು. ನೆಲ್ಯಾಡಿ ಅಶ್ವಿನಿ ಆಸ್ಪತ್ರೆ ವೈದ್ಯ ಡಾ | ಶಮಂತ್‌ ವೈ.ಕೆ, ಉಪ್ಪಿನಂಗಡಿಯ ಇಂದ್ರಪ್ರಸ್ಥ ವಿದ್ಯಾಲಯ ಸ್ಕೂಲ್ ಕೌನ್ಸಿಲ‌ರ್ ನಿವೇದಿತಾ ಪ್ರಸನ್ನ ಹಾಜರಿದ್ದರು.

Related posts

ಬೆಳ್ತಂಗಡಿ : ಬಿಜೆಪಿಯ ಹಿರಿಯ ಕಾರ್ಯಕರ್ತ ದಿ| ಬಿ. ವಿಠಲ್ ಭಟ್ ರವರಿಗೆ ನುಡಿನಮನ ಕಾರ್ಯಕ್ರಮ

Suddi Udaya

ಎಸ್‌ಡಿಎಂ ಪ.ಪೂ ಕಾಲೇಜಿನಲ್ಲಿ ಜಿಲ್ಲಾಮಟ್ಟದ ಬಾಲಕಿಯರ ಕಬಡ್ಡಿ ಪಂದ್ಯಾಟ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಎಂಡೋವೆನಸ್ ಲೇಸರ್ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶ: ಮಧ್ಯಂತರ ತಡೆ ನೀಡಲು ಹೈಕೋರ್ಟ್ ಗೆ ಅರ್ಜಿ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರಿ ದೇವಸ್ಥಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಭೇಟಿ

Suddi Udaya

ಉಜಿರೆ ಶ್ರೀ. ಧ.ಮಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲಾ ವಿದ್ಯಾರ್ಥಿ ಸಂಸತ್ತಿನ ಉದ್ಘಾಟನೆ

Suddi Udaya
error: Content is protected !!