25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕಿ ಶ್ರೀಮತಿ ಶಶಿಕಲಾ ರವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರಾದ ಸಂಗೀತ ಹಾಗೂ ಉಷಾ ರವರು ಹಾಗೂ ಒಕ್ಕೂಟ ಅಧ್ಯಕ್ಷರು ಸದಾನಂದ ಪೂಜಾರಿ, ಹಾಗೂ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ ಸೇವಾಪ್ರತಿನಿಧಿ ಹರೀಶ್ ಬಾಡರು ರವರು ಧನ್ಯವಾದ ವಿತ್ತರು.

Related posts

ಕನ್ಯಾಡಿ II, ದ. ಕ. ಜಿ. ಪ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಅಳದಂಗಡಿ: ಟೀಂ ಅಭಯಹಸ್ತ ಚ್ಯಾರಿಟೇಬಲ್ ಸ್ಪೋರ್ಟ್ಸ್ ಕ್ಲಬ್ ನಿಂದ ಅರ್ಹರಿಗೆ ಉಚಿತ ಹೊಲಿಗೆ ಯಂತ್ರ ವಿತರಣೆ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದ ಆಶ್ರಯದಲ್ಲಿ ಇಕೋಫ್ರೆಶ್ ಎಂಟರ್‌ ಪ್ರೈಸಸ್ ಬೆಳ್ತಂಗಡಿ-ಪುತ್ತೂರು ಇದರ ಸಹಯೋಗದೊಂದಿಗೆ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಹಾಗೂ ಮಾರಾಟ ಮೇಳ ಉದ್ಘಾಟನೆ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರಾ ಮಹೋತ್ಸವ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಹಲವು ಬಹುಮಾನ

Suddi Udaya

ಬೆಳ್ತಂಗಡಿ : ದಾಖಲೆಗಳಿಲ್ಲದೆ ಕಬ್ಬಿಣದ ಗುಜರಿ ವಸ್ತು ಸಾಗಾಟ: ಲಾರಿ ವಶಕ್ಕೆ ಪಡೆದು ದಂಡ ವಿಧಿಸಿದ ವಾಣಿಜ್ಯ ತೆರಿಗೆ ಇಲಾಖೆ

Suddi Udaya
error: Content is protected !!