37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಉಜಿರೆ : ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು.

ತುಳುನಾಡಿನ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, ಆಹಾರ, ಆರೋಗ್ಯವನ್ನು ಆಟಿ ದಿನಗಳಲ್ಲಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತುಳು ನಾಡಿಗೆ ಹಾಗೂ ತುಳು ಭಾಷೆಗೆ ಸಂಬಂಧಪಟ್ಟಂತಹ ಹಾಡು, ಗಾದೆ, ಸಂಧಿ ಪಾಡ್ದನ, ನೃತ್ಯ, ಭಿತ್ತಿ ಪತ್ರಿಕೆ, ಆಟಿ ತಿಂಗಳಿನ ತಿನಿಸುಗಳ ಪ್ರದರ್ಶನವನ್ನು ಹಾಗೂ ದೇಸಿ ಆಟಗಳನ್ನು ಸಹ ಏರ್ಪಡಿಸಲಾಗಿತ್ತು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿಗಳಾದ ಆರ್ಯಮನ್ ಹಾಗೂ ತ್ರಿಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪೃಥ್ವಿ ವಂದಿಸಿದರು.

Related posts

ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಅರಣ್ಯ ಇಲಾಖೆಯ ಎ ಸಿ ಎಫ್ ಭೇಟಿ

Suddi Udaya

ವಕೀಲರ ಸಂಘದಿಂದ ದಕ್ಷಿಣ ಕನ್ನಡ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶರ ಭೇಟಿ

Suddi Udaya

ಮಾಲಾಡಿ ಗ್ರಾಮ ಸಭೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವಂತೆ ಗ್ರಾಮಸ್ಥರ ಒತ್ತಾಯ

Suddi Udaya

ಧರ್ಮಸ್ಥಳ ಪಾದಯಾತ್ರಿಗಳ ಸೇವೆಗಾಗಿ ಉಚಿತ ವೈದ್ಯಕೀಯ ಶಿಬಿರಗಳ ಉದ್ಘಾಟನೆ

Suddi Udaya

ಮೇ 20-22: ಸಾಲುಕಾಯೇರು ಶ್ರೀ ಮಹಮ್ಮಾಯಿ ಅಮ್ಮನವರ ಪ್ರತಿಷ್ಠಾ ಬ್ರಹ್ಮಕಲಶೋತ್ಸವ

Suddi Udaya

ಪ್ರಕೃತಿ ಚಿಕಿತ್ಸಾ ಮತ್ತು ಯೋಗ ವಿಜ್ಞಾನದಲ್ಲಿ ಧರ್ಮಸ್ಥಳದ ಡಾ.ಚಿರನ್ವಿ ಜೈನ್ ಗೆ ಪದವಿ

Suddi Udaya
error: Content is protected !!