32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

ಉಜಿರೆ: ಹಿಂದಿನ ಕಾಲದ ಜನರು ಶಿಕ್ಷಣವಂಚಿತರಾದರೂ ಸಂಸ್ಕಾರವಂತರಾಗಿದ್ದರು. ಆದರೆ ಪ್ರಸ್ತುತ ಕಾಲದ ಜನರು ಸುಶಿಕ್ಷಿತರಾದರೂ ಅವರಲ್ಲಿ ಸಂಸ್ಕಾರದ ಕೊರತೆ ಕಂಡು ಬರುತ್ತಿದೆ ಎಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಖೇದ ವ್ಯಕ್ತಪಡಿಸಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.8 ಸಂಸ್ಥೆಯ ವಿಂಶತಿ ಹಿನ್ನೆಲೆ ಕಾರ್ಯಕ್ರಮ ಸರಣಿ ಭಾಗವಾಗಿ ಆಯೋಜಿಸಿದ್ದ ಒಂದು ದಿನದ ‘ಜೀವನ ಕೌಶಲ’ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

“ಹಿಂದೆ ಜನರು ಸಂಸ್ಕಾರವಂತರಾಗಿದ್ದರಿಂದ ಅಹಿತಕರ ಘಟನೆಗಳು ಘಟಿಸುತ್ತಿರಲಿಲ್ಲ. ಆದರೆ ಇಂದು ಉನ್ನತ ಶಿಕ್ಷಣ ಪಡೆದವರೇ ಭಯೋತ್ಪಾದನೆಯಂತಹ ಕುಕೃತ್ಯಗಳಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಸಂಸ್ಕಾರಯುತ ಶಿಕ್ಷಣದ ಆವಶ್ಯಕತೆ ಎದ್ದು ಕಾಣುತ್ತಿದೆ” ಎಂದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ, ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಸ್ವಾಗತಿಸಿದರು.

Related posts

ನಾಳೆ(ಮಾ.22): ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಹಗಲಿರುಳು ದುಡಿದ ಕಾರ್ಯಕರ್ತರಿಗೆ, ಅಭಿನಂದನಾ ಕಾರ್ಯಕ್ರಮ

Suddi Udaya

ಕೊಡಿಯಾಲಬೈಲು ಸ.ಹಿ.ಪ್ರಾ. ಶಾಲೆಯಲ್ಲಿ ಕೈ ತೊಳೆಯುವ ನೀರಿನ ಘಟಕ ಉದ್ಘಾಟನೆ

Suddi Udaya

ಜಾನಪದ ಕಡಲೋತ್ಸವ: ಜಿಲ್ಲಾ ಪರಿಷತ್ ಪ್ರಶಸ್ತಿಗೆ ಕೊಕ್ಕಡದ ಕಿಟ್ಟ ಮಲೆಕುಡಿಯ ರವರು ಆಯ್ಕೆ

Suddi Udaya

ಡಿ.5: ವಿದ್ಯುತ್ ನಿಲುಗಡೆ

Suddi Udaya

ತೆಕ್ಕಾರು ದೇವರಗುಡ್ಡೆ ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಶಿಲಾನ್ಯಾಸ

Suddi Udaya

ಧರ್ಮಸ್ಥಳದಲ್ಲಿ ಯಾತ್ರಾರ್ಥಿಯ ಬ್ಯಾಗ್‌ನಲ್ಲಿದ್ದ ನಗದು ಸಹಿತ ರೂ.2 ಲಕ್ಷ ಸೊತ್ತು ಕಳವು: ದೇವರ ದರ್ಶನಕ್ಕೆ ಹೋಗಿದ್ದಾಗ ಕಾರಿನ ಗಾಜು ಒಡೆದು ಕೃತ್ಯ

Suddi Udaya
error: Content is protected !!