September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

ಉಜಿರೆ: ಹಿಂದಿನ ಕಾಲದ ಜನರು ಶಿಕ್ಷಣವಂಚಿತರಾದರೂ ಸಂಸ್ಕಾರವಂತರಾಗಿದ್ದರು. ಆದರೆ ಪ್ರಸ್ತುತ ಕಾಲದ ಜನರು ಸುಶಿಕ್ಷಿತರಾದರೂ ಅವರಲ್ಲಿ ಸಂಸ್ಕಾರದ ಕೊರತೆ ಕಂಡು ಬರುತ್ತಿದೆ ಎಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಖೇದ ವ್ಯಕ್ತಪಡಿಸಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.8 ಸಂಸ್ಥೆಯ ವಿಂಶತಿ ಹಿನ್ನೆಲೆ ಕಾರ್ಯಕ್ರಮ ಸರಣಿ ಭಾಗವಾಗಿ ಆಯೋಜಿಸಿದ್ದ ಒಂದು ದಿನದ ‘ಜೀವನ ಕೌಶಲ’ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

“ಹಿಂದೆ ಜನರು ಸಂಸ್ಕಾರವಂತರಾಗಿದ್ದರಿಂದ ಅಹಿತಕರ ಘಟನೆಗಳು ಘಟಿಸುತ್ತಿರಲಿಲ್ಲ. ಆದರೆ ಇಂದು ಉನ್ನತ ಶಿಕ್ಷಣ ಪಡೆದವರೇ ಭಯೋತ್ಪಾದನೆಯಂತಹ ಕುಕೃತ್ಯಗಳಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಸಂಸ್ಕಾರಯುತ ಶಿಕ್ಷಣದ ಆವಶ್ಯಕತೆ ಎದ್ದು ಕಾಣುತ್ತಿದೆ” ಎಂದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ, ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಸ್ವಾಗತಿಸಿದರು.

Related posts

ಇಳಂತಿಲ :ಶ್ರೀ ಕೇಶವ ಶಿಶು ಮಂದಿರಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ. 1 ಲಕ್ಷ ನೆರವು

Suddi Udaya

ಜಿ.ಪಂ. ಉಪ ಕಾರ್ಯದರ್ಶಿ ಆನಂದ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ತಾಲೂಕು ಪಂಚಾಯತ್ ಮಾಸಿಕ ಕೆ.ಡಿ.ಪಿ.ಸಭೆ

Suddi Udaya

ಉಜಿರೆ : ಶ್ರೀ ಧ. ಮಂ. ಆಂ.ಮಾ. (ರಾಜ್ಯ ಪಠ್ಯಕ್ರಮ) ಶಾಲೆಯಲ್ಲಿ ‘ಆಟಿಡೊಂಜಿ ದಿನ’ ಕಾರ್ಯಕ್ರಮ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಜನಮಂಗಳ ಕಾರ್ಯಕ್ರಮದಡಿ ವೀಲ್ ಚಯರ್ ವಿತರಣೆ

Suddi Udaya

ಬೆಳ್ತಂಗಡಿ ಬಿಜೆಪಿ ಕಚೇರಿಗೆ ನೂತನ ಸಂಸದ ಬ್ರಿಜೇಶ್ ಚೌಟ ಭೇಟಿ: ಮಂಡಲದ ವತಿಯಿಂದ ನೂತನ ಸಂಸದರಿಗೆ ಅಭಿನಂದನೆ

Suddi Udaya

ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಮ್ಯಾರಥಾನ್ ಯೋಗ ತರಬೇತಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್

Suddi Udaya
error: Content is protected !!