23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

ಉಜಿರೆ: ಹಿಂದಿನ ಕಾಲದ ಜನರು ಶಿಕ್ಷಣವಂಚಿತರಾದರೂ ಸಂಸ್ಕಾರವಂತರಾಗಿದ್ದರು. ಆದರೆ ಪ್ರಸ್ತುತ ಕಾಲದ ಜನರು ಸುಶಿಕ್ಷಿತರಾದರೂ ಅವರಲ್ಲಿ ಸಂಸ್ಕಾರದ ಕೊರತೆ ಕಂಡು ಬರುತ್ತಿದೆ ಎಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಖೇದ ವ್ಯಕ್ತಪಡಿಸಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.8 ಸಂಸ್ಥೆಯ ವಿಂಶತಿ ಹಿನ್ನೆಲೆ ಕಾರ್ಯಕ್ರಮ ಸರಣಿ ಭಾಗವಾಗಿ ಆಯೋಜಿಸಿದ್ದ ಒಂದು ದಿನದ ‘ಜೀವನ ಕೌಶಲ’ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

“ಹಿಂದೆ ಜನರು ಸಂಸ್ಕಾರವಂತರಾಗಿದ್ದರಿಂದ ಅಹಿತಕರ ಘಟನೆಗಳು ಘಟಿಸುತ್ತಿರಲಿಲ್ಲ. ಆದರೆ ಇಂದು ಉನ್ನತ ಶಿಕ್ಷಣ ಪಡೆದವರೇ ಭಯೋತ್ಪಾದನೆಯಂತಹ ಕುಕೃತ್ಯಗಳಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಸಂಸ್ಕಾರಯುತ ಶಿಕ್ಷಣದ ಆವಶ್ಯಕತೆ ಎದ್ದು ಕಾಣುತ್ತಿದೆ” ಎಂದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ, ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಸ್ವಾಗತಿಸಿದರು.

Related posts

ಗ್ರಾಮ ಪಂಚಾಯತಿ ಕಲಿಕಾ ಕೇಂದ್ರಗಳ ಯಶೋಗಾಥೆಗಳ ದಾಖಲೀಕರಣ ಕುರಿತು ತರಬೇತಿ: ಉಜಿರೆ – ಮಡಂತ್ಯಾರು ಗ್ರಾ.ಪಂ. ಅಧ್ಯಕ್ಷರು, ಪಿಡಿಓ ಭಾಗಿ

Suddi Udaya

ಉಜಿರೆ ಅನುಗ್ರಹ ಪ್ರೌಢಶಾಲೆಯಲ್ಲಿ ಅಗ್ನಿ ಸುರಕ್ಷತೆ ಮತ್ತು ಮುನ್ನೆಚ್ಚರಿಕೆ ಕ್ರಮ ಕುರಿತು ಮಾಹಿತಿ ಮತ್ತು ಪ್ರಾತ್ಯಕ್ಷಿಕೆ ಕಾರ್ಯಕ್ರಮ

Suddi Udaya

ಬಿಜೆಪಿಯಿಂದ 241 ಬೂತ್‌ಗಳಲ್ಲಿ ನೂರಾರು ಸಂಖ್ಯೆಯ ಕಾರ್ಯಕರ್ತರಿಂದ ಮನೆ ಮನೆ ಪ್ರಚಾರ ಅಭಿಯಾನ

Suddi Udaya

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

Suddi Udaya

ನಾಲ್ಕೂರು ಇಕೋ ಫಾರ್ಮ್ ನಲ್ಲಿ ಪುರಾತನ ಕಾಲದ ನಾಗ ಕಲ್ಲುಗಳು ಪತ್ತೆ

Suddi Udaya

ಮಚ್ಚಿನ ಅಂಗನವಾಡಿ ಕೇಂದ್ರದಲ್ಲಿ ಪರಿಸರ ದಿನಾಚರಣೆ

Suddi Udaya
error: Content is protected !!