22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

ಉಜಿರೆ: ಹಿಂದಿನ ಕಾಲದ ಜನರು ಶಿಕ್ಷಣವಂಚಿತರಾದರೂ ಸಂಸ್ಕಾರವಂತರಾಗಿದ್ದರು. ಆದರೆ ಪ್ರಸ್ತುತ ಕಾಲದ ಜನರು ಸುಶಿಕ್ಷಿತರಾದರೂ ಅವರಲ್ಲಿ ಸಂಸ್ಕಾರದ ಕೊರತೆ ಕಂಡು ಬರುತ್ತಿದೆ ಎಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಖೇದ ವ್ಯಕ್ತಪಡಿಸಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.8 ಸಂಸ್ಥೆಯ ವಿಂಶತಿ ಹಿನ್ನೆಲೆ ಕಾರ್ಯಕ್ರಮ ಸರಣಿ ಭಾಗವಾಗಿ ಆಯೋಜಿಸಿದ್ದ ಒಂದು ದಿನದ ‘ಜೀವನ ಕೌಶಲ’ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

“ಹಿಂದೆ ಜನರು ಸಂಸ್ಕಾರವಂತರಾಗಿದ್ದರಿಂದ ಅಹಿತಕರ ಘಟನೆಗಳು ಘಟಿಸುತ್ತಿರಲಿಲ್ಲ. ಆದರೆ ಇಂದು ಉನ್ನತ ಶಿಕ್ಷಣ ಪಡೆದವರೇ ಭಯೋತ್ಪಾದನೆಯಂತಹ ಕುಕೃತ್ಯಗಳಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಸಂಸ್ಕಾರಯುತ ಶಿಕ್ಷಣದ ಆವಶ್ಯಕತೆ ಎದ್ದು ಕಾಣುತ್ತಿದೆ” ಎಂದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ, ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಸ್ವಾಗತಿಸಿದರು.

Related posts

ಬೆಳ್ತಂಗಡಿ: ಅಪ್ಸರಾ ಫ್ಯಾಶನ್ಸ್ ಹಾಗೂ ಮಿಷ್‌ಮಷ್ ಫ್ಯಾನ್ಸಿ & ಗಿಫ್ಟ್ ಸೆಂಟರಿನಲ್ಲಿ ದಸರಾ ಧಮಾಕ ಸೇಲ್

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ಹೆಗ್ಗಡೆಯವರ ವಿರುದ್ಧ ಮಾನಹಾನಿ ಹೇಳಿಕೆಗಳನ್ನು ನೀಡದಂತೆ ಹೈಕೋರ್ಟ್ ಮಹತ್ವದ ತೀರ್ಪು

Suddi Udaya

ಶಿರ್ಲಾಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪುನಃಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಶಿವನ ಸನ್ನಿಧಿಗೆ ಹರಿದು ಬಂದ ಬೃಹತ್ ಹಸಿರುವಾಣಿ ಹೊರೆಕಾಣಿಕೆ, ಪ್ರಗತಿಪರ ಕೃಷಿಕ ಸಂತೋಷ್ ಕುಮಾರ್ ಕಾಪಿನಡ್ಕ ರವರಿಂದ ಉಗ್ರಾಣ ಮುಹೂರ್ತ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಗುರುವಾಯನಕೆರೆ ಶಕ್ತಿ ನಗರದ ಜಂಕ್ಷನ್ ನಲ್ಲಿ ನಾಮಫಲಕ ಅಳವಡಿಕೆ

Suddi Udaya

ಉಜಿರೆ ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸಂಸ್ಕೃತೋತ್ಸವ ಕಾರ್ಯಕ್ರಮ

Suddi Udaya

ನಾರಾವಿ ಗ್ರಾಮ ಪಂಚಾಯತಿಗೆ ವಿ.ಪ. ಶಾಸಕ ಕಿಶೋರ್ ಕುಮಾರ್ ಪುತ್ತೂರು ಭೇಟಿ

Suddi Udaya
error: Content is protected !!