38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗುರುವಾಯನಕೆರೆ : ಆ. 09ರಂದು ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳು ಸೇರಿ ಪಾಂಡುರಂಗ ನಾಗರಿಕ ಸೇವಾ ಪ್ರತಿಷ್ಠಾನದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು.

ನಮ್ಮ ಮನೆ ಶಾಖೆಯ ಶಿಕ್ಷಕರಾದ ಶಿವಕುಮಾರ್ ರವರು ಅಣ್ಣ – ತಂಗಿಯರ ಬಾಂಧವ್ಯವನ್ನು ಪೌರಾಣಿಕವಾಗಿ ನಡೆದ ಘಟನೆಗಳ ಕಥೆಗಳ ಮೂಲಕ ಸ ವಿಸ್ತಾರ ವಾಗಿ ತಿಳಿಸುವುದರೊಂದಿಗೆ ರಕ್ಷಾಬಂಧನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಎಲ್ಲಾ ಅಣ್ಣ ಅಕ್ಕಂದಿರಿಗೆ ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು.


ಪಾಂಡುರಂಗ ಶಾಖೆಯ ಶಿಕ್ಷಕರಾದ ದಯಾನಂದರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಎಲ್ಲಾ ಅಣ್ಣಂದಿರು ಹಾಗೂ ಅಕ್ಕಂದಿರು ಹರ್ಷೋಲ್ಲಾಸದಿಂದ ಪರಸ್ಪರ ರಕ್ಷಾಬಂಧನವನ್ನು ಕಟ್ಟುತ್ತಾ ಸಿಹಿ ತಿಂಡಿಯನ್ನು ಹಂಚುತ್ತಾ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.


ಎರಡು ಶಾಖೆಯಿಂದ ಸುಮಾರು 75 ಯೋಗ ಬಂಧುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ ನ ಯೋಜನಾಧಿಕಾರಿ ಅವನೀಶ್ ಪಿ ರವರಿಗೆ ಭಾರತೀಯ ರೆಡ್ ಕ್ರಾಸ್ ಸೊಸೈಟಿಯ ರಾಜ್ಯ ಘಟಕದ ವತಿಯಿಂದ ಸನ್ಮಾನ

Suddi Udaya

ಆದಿ ದ್ರಾವಿಡ ಸಮಾಜ ಸೇವಾ ಸಂಘದ ಮೂಲಕ ಮಕ್ಕಳಿಗೆ ಶಿಕ್ಷಣ ಮತ್ತು ಉದ್ಯೋಗದ ಕುರಿತು ಮಾಹಿತಿ ಶಿಬಿರ

Suddi Udaya

ಕುವೆಟ್ಟು: ಸ. ಉ. ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟದಿಂದ ಆಟಿಡೊಂಜಿ ದಿನ

Suddi Udaya
error: Content is protected !!