25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ಶ್ರೀ ಪತಂಜಲಿ ಯೋಗ ಶಿಕ್ಷಣ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗುರುವಾಯನಕೆರೆ : ಆ. 09ರಂದು ಶ್ರೀ ಪತಾಂಜಲಿ ಯೋಗ ಶಿಕ್ಷಣ ಸಮಿತಿ ವತಿಯಿಂದ ಗುರುವಾಯನಕೆರೆ ನಮ್ಮ ಮನೆ ಶಾಖೆ ಮತ್ತು ಪಾಂಡುರಂಗ ಶಾಖೆಯ ಯೋಗ ಬಂಧುಗಳು ಸೇರಿ ಪಾಂಡುರಂಗ ನಾಗರಿಕ ಸೇವಾ ಪ್ರತಿಷ್ಠಾನದಲ್ಲಿ ರಕ್ಷಾಬಂಧನ ಕಾರ್ಯಕ್ರಮವನ್ನು ಆಚರಿಸಿದರು.

ನಮ್ಮ ಮನೆ ಶಾಖೆಯ ಶಿಕ್ಷಕರಾದ ಶಿವಕುಮಾರ್ ರವರು ಅಣ್ಣ – ತಂಗಿಯರ ಬಾಂಧವ್ಯವನ್ನು ಪೌರಾಣಿಕವಾಗಿ ನಡೆದ ಘಟನೆಗಳ ಕಥೆಗಳ ಮೂಲಕ ಸ ವಿಸ್ತಾರ ವಾಗಿ ತಿಳಿಸುವುದರೊಂದಿಗೆ ರಕ್ಷಾಬಂಧನದ ಮಹತ್ವದ ಬಗ್ಗೆ ಮಾಹಿತಿಯನ್ನು ನೀಡಿ ಎಲ್ಲಾ ಅಣ್ಣ ಅಕ್ಕಂದಿರಿಗೆ ರಕ್ಷಾಬಂಧನದ ಶುಭಾಶಯಗಳನ್ನು ಕೋರಿದರು.


ಪಾಂಡುರಂಗ ಶಾಖೆಯ ಶಿಕ್ಷಕರಾದ ದಯಾನಂದರವರು ಕಾರ್ಯಕ್ರಮವನ್ನು ನಿರೂಪಿಸಿದರು.
ಎಲ್ಲಾ ಅಣ್ಣಂದಿರು ಹಾಗೂ ಅಕ್ಕಂದಿರು ಹರ್ಷೋಲ್ಲಾಸದಿಂದ ಪರಸ್ಪರ ರಕ್ಷಾಬಂಧನವನ್ನು ಕಟ್ಟುತ್ತಾ ಸಿಹಿ ತಿಂಡಿಯನ್ನು ಹಂಚುತ್ತಾ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಿದರು.


ಎರಡು ಶಾಖೆಯಿಂದ ಸುಮಾರು 75 ಯೋಗ ಬಂಧುಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Related posts

ಉಜಿರೆ ಅನುಗ್ರಹ ಶಿಕ್ಷಣ ಸಂಸ್ಥೆಯ ಸಂಭ್ರಮದ ವಾರ್ಷಿಕೋತ್ಸವ

Suddi Udaya

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಸಾರ್ವಜನಿಕರು ಬೆಂಬಲ ನೀಡಬೇಕು: ಧರ್ಮಗುರು ಫಾ. ಆದರ್ಶ್ ಜೋಸೆಫ್

Suddi Udaya

ಚಾರ್ಮಾಡಿ: ಪ್ರಯಾಣಿಕರ ಕಾರು ಬ್ರೇಕ್ ಫೈಲ್ ಆಗಿ ಧರೆಗೆ ಢಿಕ್ಕಿ: ಸಾಗರದ ವಿನೋದ್‌ರಿಗೆ ಗಂಭೀರ ಗಾಯ

Suddi Udaya

ಮಾ.16: ಕನ್ಯಾಡಿ ಸೇವಾಭಾರತಿ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ ಸಾಧನ ಸಲಕರಣೆಗಳ ವಿತರಣೆ , ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ

Suddi Udaya

ಪುಂಜಾಲಕಟ್ಟೆ ಸ.ಪ್ರ. ದರ್ಜೆ ಕಾಲೇಜಿನಲ್ಲಿ ರಕ್ತದಾನ ಶಿಬಿರ

Suddi Udaya

ಉಜಿರೆ ಎಸ್.ಡಿ ಎಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚಿಂತನಾ ದಿನಾಚರಣೆ

Suddi Udaya
error: Content is protected !!