25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಪತಂಜಲಿ ಯೋಗ ಶಾಖೆಯಲ್ಲಿ ರಕ್ಷಾಬಂಧನ ಆಚರಣೆ

ಗೇರುಕಟ್ಟೆ : ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ ಕರ್ನಾಟಕ, ಕೇಂದ್ರ ಕಚೇರಿ ತುಮಕೂರು ನೇತ್ರಾವತಿ ವಲಯ ಪುತ್ತೂರು ಇದರ ಕ್ಷೀರಸಂಗಮ ಸಭಾ ಭವನ ಕಳಿಯ ಗೇರುಕಟ್ಟೆ ಶಾಖೆಯಲ್ಲಿ 180 ನೇ ದಿನದ ಯೋಗದ ನಿತ್ಯ ಪ್ರಾತ್ಯಕ್ಷಿಕೆಯೊಂದಿಗೆ ರಕ್ಷಾ ಬಂಧನ ಕಾರ್ಯಕ್ರಮವನ್ನು ಆಚರಿಸಲಾಯಿತು.

ಕೇಂದ್ರದ ಮುಖ್ಯ ಶಿಕ್ಷಕಿ ಪ್ರೇಮಲತಾ ಗಣೇಶ್ ರಕ್ಷಾಬಂಧನದ ಪೌರಾಣಿಕ ಮತ್ತು ಐತಿಹಾಸಿಕ ಹಿನ್ನೆಲೆಯನ್ನು ವಿವರಿಸಿ ಭಾರತ ದೇಶ ಮತ್ತು ಸನಾತನ ಧರ್ಮದ ರಕ್ಷಣೆಗೆ ನಾವೆಲ್ಲರೂ ಮಹತ್ವವನ್ನು ನೀಡಿ ಕಂಕಣ ಬದ್ಧರಾಗುವ ಮೂಲಕ ಭಾರತದ ಸಂಸ್ಕೃತಿ ಮತ್ತು ಗೌರವವನ್ನು ಎತ್ತಿ ಹಿಡಿಯಬೇಕೆಂದರು.

ಕೇಂದ್ರದ ಸಹ ಶಿಕ್ಷಕ ಸುಕೇಶ, ಸತೀಶ ನಾಳ, ಶಿವಣ್ಣಆಚಾರ್ಯ, ಕೇಂದ್ರದ ಸಂಚಾಲಕರಾದ ವಿಜಯ, ದಿವಾಕರ ಆಚಾರ್ಯ, ಮಧುಕರ, ರಮೇಶ, ಅಶೋಕ ಆಚಾರ್ಯ,ವಸಂತ ಆಚಾರ್ಯ ,ಗಣೇಶ ,ಶುಭಮಂಗಳ,ಪದ್ಮಲತಾ, ಭಾರತಿ, ಧರಿತ್ರಿ ಭಾಗವಹಿಸಿ ಪರಸ್ಪರ ರಕ್ಷಾಬಂಧನವನ್ನು ಮಾಡಿ ಶುಭ ಹಾರೈಸಿದರು.

Related posts

ಇಂದಬೆಟ್ಟು: ಹೆಬ್ಬಾವನ್ನು ಬೇಟೆಯಾಡಿದ ಕಾಳಿಂಗ ಸರ್ಪ: ಸ್ನೇಕ್ ಅಶೋಕ್ ರವರಿಂದ ಹೆಬ್ಬಾವು ರಕ್ಷಣೆ

Suddi Udaya

ಕೊಂಕನ್ ಬೆಲ್ಸ್ ಕ್ರೀಡಾ ಕೂಟ – ಚಾಂಪಿಯನ್‌ಶಿಪ್ ಚಾಲೆಂಜ್

Suddi Udaya

ಆ.1 ರಿಂದ 15ರ ವರೆಗೆ ಶ್ರೀ ದುರ್ಗಾ ಟೆಕ್ಸ್ ಟೈಲ್ಸ್ ನಲ್ಲಿ ಸಾರಿಮೇಳ: ಗ್ರಾಹಕರಿಗೆಂದೇ ಆಯ್ದು ತಂದ ವಿವಿಧ ಉಡುಪುಗಳ ಮೇಲೆ ಡಿಸ್ಕೌಂಟ್ ಸೇಲ್

Suddi Udaya

ಕಿಂಡಿ ಅಣೆಕಟ್ಟುಗಳಿಗೆ ಜೋಡಿಸಿದ್ದ ಹಲಗೆಗಳ ತೆರವು ಕಾರ್ಯ

Suddi Udaya

ಬಟ್ಲಡ್ಕ ಜುಮಾ ಮಸೀದಿಯಲ್ಲಿ ಈದ್ ಹಬ್ಬ ಆಚರಣೆ

Suddi Udaya

ರಜತ ಸಂಭ್ರಮದಲ್ಲಿರುವ ಉಜಿರೆಯ ಬೆನಕ ಆಸ್ಪತ್ರೆಗೆ ಡಾ.ಪದ್ಮನಾಭ ಕಾಮತ್ ಭೇಟಿ

Suddi Udaya
error: Content is protected !!