23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವಲಯ 15ರ ಪ್ರಾಂತ್ಯ E ಯ ವಲಯ ಉಪಾಧ್ಯಕ್ಷ ಸುಹಾಸ್ ಎ.ಪಿಎಸ್ ಮರಿಕೆಯವರು LAV (LO Assistance visit) ಕಾರ್ಯಕ್ರಮವನ್ನು ಸಂತ ಜಾನರ ಹಿ ಪ್ರಾ ಶಾಲೆ ಕೌಕ್ರಾಡಿಯಲ್ಲಿ ಆ.6ರಂದು ನಡೆಯಿತು.

ಈ ಸಂದರ್ಭದಲ್ಲಿ ಅವರು ಘಟಕದಲ್ಲಿ ಇದುವರೆಗೆ ನಡೆದ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು ಹಾಗೂ ಮುಂದೆ ನಡೆಸಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಉಪಾಧ್ಯಕ್ಷ ಆಯುಷ್ ಜೈನ್ ಸಭೆಗೆ ಪರಿಚಯಿಸಿದರು.

ಜೆಸಿ ಧನುಷ್ ಮತ್ತು ಜೇಸಿಂತಾ ಡೆಸೋಜಾ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು. ಮಾರ್ಗದರ್ಶಕರಾದ ಜೋಸೆಫ್ ಪಿರೇರಾ, ಪೂರ್ವಧ್ಯಕ್ಷರಾದ ಶ್ರೀದರ್ ರಾವ್, ನಿಕಟಪೂರ್ವ ಅಧ್ಯಕ್ಷ ಸಂತೋಷ ಜೈನ್, ವಿಕ್ಟರ್, ದೀಪಾ, ಜೇನವಿವ್, ಕೊಕ್ಕಡದ ವಕೀಲರಾದ ಶ್ರೀಮತಿ ಧನ್ಯ ಕೇವಳ, ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೆಸಿಐ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಕಾರ್ಯಕ್ರಮದ ಉದ್ದೇಶಕ್ಕೆ ಸಾಥ್ ನೀಡಿದರು.

ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶೋಭಾ ಪಿ.ಬಿ ಸ್ವಾಗತಿದರು. ಜೆಸಿ ವಾಣಿಯನ್ನು ಜೋಯೆಲ್ ಪೀರೆರಾ ವಾಚಿಸಿ ಸಭೆಯನ್ನು ಕಾರ್ಯದರ್ಶಿ ಚಂದನಾ ಜೈನ್ ವಂದಿಸಿದರು.

Related posts

ನಾರಾವಿ: ಸಂತ ಅಂತೋನಿ ಶಿಕ್ಷಣ ‘ಸಂಸ್ಥೆಗಳ ದಿನಾಚರಣೆ’

Suddi Udaya

ಬೆಳ್ತಂಗಡಿ ವಲಯದ ಮಟ್ಟದ ಪ್ರಗತಿ ಬಂಧು ಒಕ್ಕೂಟಗಳ ಪದಗ್ರಹಣ ಸಮಾರಂಭ ಹಾಗೂ ಸಾಧನಾ ಸಮಾವೇಶ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ತರಬೇತಿ ಕಾರ್ಯಕ್ರಮ

Suddi Udaya

ಕು| ಸೌಜನ್ಯ ಕೊಲೆ ಪ್ರಕರಣ ಮರು ತನಿಖೆಗೆ ಆಗ್ರಹಿಸಿ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಶಿಬಾಜೆ ಗ್ರಾಮ ಸಮಿತಿಯಿಂದ ಸಿಎಂ ಸಿದ್ಧರಾಮಯ್ಯರಿಗೆ ಮನವಿ

Suddi Udaya

ಕಾಪಿನಡ್ಕ ಆಟೋ ಚಾಲಕ- ಮಾಲಕ ಸಂಘದ ಮಾಜಿ ಅಧ್ಯಕ್ಷ ಸುಂದರ ದಾಸ್ ನಿಧನ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಚರ್ಚಾ ಸ್ಪರ್ಧೆ

Suddi Udaya
error: Content is protected !!