September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಕೊಕ್ಕಡ ಕಪಿಲಾ ಘಟಕದಿಂದ ಲೋ ಅಸ್ಸಿಸ್ಟೆಂನ್ಸ್ ವಿಸಿಟ್( LAV) ಕಾರ್ಯಕ್ರಮ

ಕೊಕ್ಕಡ: ಜೆಸಿಐ ಕೊಕ್ಕಡ ಕಪಿಲಾ ಘಟಕದ ವಲಯ 15ರ ಪ್ರಾಂತ್ಯ E ಯ ವಲಯ ಉಪಾಧ್ಯಕ್ಷ ಸುಹಾಸ್ ಎ.ಪಿಎಸ್ ಮರಿಕೆಯವರು LAV (LO Assistance visit) ಕಾರ್ಯಕ್ರಮವನ್ನು ಸಂತ ಜಾನರ ಹಿ ಪ್ರಾ ಶಾಲೆ ಕೌಕ್ರಾಡಿಯಲ್ಲಿ ಆ.6ರಂದು ನಡೆಯಿತು.

ಈ ಸಂದರ್ಭದಲ್ಲಿ ಅವರು ಘಟಕದಲ್ಲಿ ಇದುವರೆಗೆ ನಡೆದ ಕಾರ್ಯಕ್ರಮಗಳ ಪರಿಶೀಲನೆ ನಡೆಸಿದರು ಹಾಗೂ ಮುಂದೆ ನಡೆಸಬೇಕಾದ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ವಲಯ ಉಪಾಧ್ಯಕ್ಷ ಆಯುಷ್ ಜೈನ್ ಸಭೆಗೆ ಪರಿಚಯಿಸಿದರು.

ಜೆಸಿ ಧನುಷ್ ಮತ್ತು ಜೇಸಿಂತಾ ಡೆಸೋಜಾ ಕಾರ್ಯಕ್ರಮದ ಕುರಿತು ಅನಿಸಿಕೆ ಹೇಳಿದರು. ಮಾರ್ಗದರ್ಶಕರಾದ ಜೋಸೆಫ್ ಪಿರೇರಾ, ಪೂರ್ವಧ್ಯಕ್ಷರಾದ ಶ್ರೀದರ್ ರಾವ್, ನಿಕಟಪೂರ್ವ ಅಧ್ಯಕ್ಷ ಸಂತೋಷ ಜೈನ್, ವಿಕ್ಟರ್, ದೀಪಾ, ಜೇನವಿವ್, ಕೊಕ್ಕಡದ ವಕೀಲರಾದ ಶ್ರೀಮತಿ ಧನ್ಯ ಕೇವಳ, ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಜೆಸಿಐ ಕುಟುಂಬದ ಎಲ್ಲ ಸದಸ್ಯರು ಭಾಗವಹಿಸಿ, ಕಾರ್ಯಕ್ರಮದ ಉದ್ದೇಶಕ್ಕೆ ಸಾಥ್ ನೀಡಿದರು.

ಕಾರ್ಯಕ್ರಮವನ್ನು ಘಟಕದ ಅಧ್ಯಕ್ಷೆ ಶೋಭಾ ಪಿ.ಬಿ ಸ್ವಾಗತಿದರು. ಜೆಸಿ ವಾಣಿಯನ್ನು ಜೋಯೆಲ್ ಪೀರೆರಾ ವಾಚಿಸಿ ಸಭೆಯನ್ನು ಕಾರ್ಯದರ್ಶಿ ಚಂದನಾ ಜೈನ್ ವಂದಿಸಿದರು.

Related posts

ಮಡಂತ್ಯಾರು: ಬಸವನಗುಡಿ ಒಕ್ಕೂಟದ ಸದಸ್ಯರಿಗೆ ಸುರಕ್ಷಾ ಕಾರ್ಡ್ ವಿತರಣೆ

Suddi Udaya

ಉಜಿರೆ: ಶ್ರೀ ಧ.ಮಂ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ವಿತರಣೆ

Suddi Udaya

ಕೌಟುಂಬಿಕ ವಿಚಾರದಲ್ಲಿ ಕಲಹ: ಮಾವನಿಗೆ ಸ್ಕೂಟರ್ ನಲ್ಲಿ ಡಿಕ್ಕಿ ಹೊಡೆದು ಗಂಭೀರ ಗಾಯಗೊಳಿಸಿದ ಅಳಿಯ: ಮಿತ್ತಬಾಗಿಲು ಕಂಬಳದಡ್ಡದಲ್ಲಿ ನಡೆದ ಘಟನೆ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಷಷ್ಠಿ ಮಹೋತ್ಸವ, ಮಹಾರಥೋತ್ಸವ

Suddi Udaya

ಉಜಿರೆ ಶ್ರೀ ಧ.ಮಂ. ಅ. ಸೆಕೆಂಡರಿ ಶಾಲೆಯಲ್ಲಿ ಸಂಭ್ರಮದ ‘ಪ್ರಾರಂಭೋತ್ಸವ’

Suddi Udaya
error: Content is protected !!