22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆ.9 ರಂದು ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಅಧ್ಯಕ್ಷತೆಯಲ್ಲಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷ ಜಯಾನಂದ ಕಲ್ಲಾಪು ಮಾತನಾಡಿ ಸಂಘ ವಾರ್ಷಿಕವಾಗಿ ರೂ. 276.82 ಕೋಟಿಗಳ ವ್ಯವಹಾರವನ್ನು ಮಾಡಿ ರೂ. 1.16 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್ ಘೋಷಿಸಲಾಗಿದೆ. ಸಾಲ ವಸೂಲಿ ಶೇ. 100 ಆಗಿವೆ ಎಂದು ತಿಳಿಸಲು ಸಂತೋಷವಾಗುತ್ತದೆ. ಅಲ್ಲದೆ ಕಳೆದ 24 ವರ್ಷಗಳಿಂದ ಸತತವಾಗಿ ಲೆಕ್ಕ ಪರಿಶೋಧನೆ ಯಲ್ಲಿ ‘ಎ’ ಗ್ರೇಡ್ ಪಡೆದಿರುವುದು ಅಲ್ಲದೆ ಸತತ 25 ವರ್ಷಗಳಿಂದ ಲಾಭದಲ್ಲಿ ನಡೆಯುತ್ತಿದೆ. ಈ ಸಾಧನೆಗೆ ಸದಸ್ಯರುಗಳ, ನಿರ್ದೇಶಕರುಗಳ ಸಹಕಾರ ಹಾಗೂ ಮಾರ್ಗದರ್ಶನ ಅಲ್ಲದೆ ನಮ್ಮ ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಕಾರಣ ಎಂದು ಹೇಳಿದರು.

ಉಪಾಧ್ಯಕ್ಷ ಸುನೀಲ್ ಅಣಾವು, ನಿರ್ದೇಶಕರಾದ ಜಗದೀಶ್ ಶೆಟ್ಟಿ ಮೈರ, ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಸರೋಜಿನಿ, ರಜನಿನಾಥ್, ಸುರೇಶ್, ಶ್ರೀನಿವಾಸ್ ಹಾಗೂ ಜಯವಿಕ್ರಮ್ ಕಲ್ಲಾಪು, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ:
ಡಾ.ಯು.ಪಿ.ರತ್ನಾಕರ ರಾವ್, ಅಶೋಕ್ ಕುಮಾರ್ ಮೂಂಡೂರು, ಅಜಿತ್ ಕುಮಾರ್ ಕೆ. ಎನ್., ನಾರಾಯಣ ಗೌಡ ಉರುವಾಲು, ವಿಜಯ, ಇಸುಬು, ಅವ್ವ ಬಿ., ಬೇಬಿ ಪಿ.ವರ್ಗಿಸ್, ವೀರಪ್ಪ ಗೌಡ, ಲಕ್ಷ್ಮಣ್ ನಾಯ್ಕ್ ಹಲೇಜಿ, ನೇತ್ರಾವತಿ, ಬೋಮ್ಮಯ್ಯ ಬಂಗೇರ, ಡಾ.ವೈಷ್ಣವಿ ಕೆ.ವಿ., ಅಚ್ಚುತ ಆಚಾರ್ಯ, ಮೋಹಿನಿ, ಜನಾರ್ದನ ಗೌಡ ನಾಕಾಲು, ಶಂಕರ್ ನಾರಾಯಣ್ ಭಟ್ ಮತ್ತು ಡೀಕಯ್ಯ ಗೌಡ ಸನ್ಮಾನಿಸಲಾಯಿತು. ಸಂಘದ ವ್ಯಾಪ್ತಿಯ ಉರುವಾಲು, ತಣ್ಣೀರುಪಂತ, ಕರಾಯ ಗ್ರಾಮಗಳಲ್ಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉನ್ನತ ಮಟ್ಟದಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ವಾಗತಿಸಿ, ನಿರೂಪಿಸಿದರು. ನಿರ್ದೇಶಕಿ ಜಯಂತಿ ಪಾಲೇದು ವಂದಿಸಿದರು.

Related posts

ಮುಳಿಯ ಗೋಲ್ಡ್ ಅಂಡ್ ಡೈಮಂಡ್ಸ್‌ನಲ್ಲಿ ‘ಸಂಕ್ರಾಂತಿಗೆ ಸ್ವರ್ಣಾರಂಭ’: ಜ.9ರಿಂದ 20ರ ವರೆಗೆ ವಿಶೇಷ ಉತ್ಸವ

Suddi Udaya

ಶಿಬರಾಜೆ-ಪರಪ್ಪು ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿಯಿಂದ ಅರ್ಧ ಏಕಾಹ ಭಜನಾ ಕಾರ್ಯಕ್ರಮ: ಡಾ. ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಮೊಗ್ರು: ಅಲೆಕ್ಕಿ ಜೈರಾಮ ಸೇವಾ ಟ್ರಸ್ಟ್ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಗೋಪೂಜೆ, ತುಳಸಿಪೂಜೆ, ಭಜನೆ, ಹಣತೆಗಳ ದೀಪ ಪ್ರಜ್ವಲನೆ

Suddi Udaya

ರಿಕ್ಷಾ ಚಾಲಕ ಮಾಲಕರ ಸಂಘದ ಸದಸ್ಯ ಆನಂದ ಪಾದೆ ರವರಿಗೆ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಜೆಸಿಐ ಬೆಳ್ತಂಗಡಿ ಆತಿಥ್ಯದಲ್ಲಿ ಎಕ್ಸೆಲ್ ಪಿಯು ಕಾಲೇಜು ಸಹಭಾಗಿತ್ವದಲ್ಲಿ ಜೆಸಿಐ ಭಾರತದ ವಲಯ 15 ರ ಚಿಗುರು ತರಬೇತಿ ಕಾರ್ಯಾಗಾರ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಿ.ಎ ವೃತ್ತಿಪರ ಶಿಕ್ಷಣದ ಅವಕಾಶಗಳ ಬಗ್ಗೆ ಕಾರ್ಯಾಗಾರ

Suddi Udaya
error: Content is protected !!