September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಶೇ.12 ಡಿವಿಡೆಂಡ್ ಘೋಷಣೆ

ಕಲ್ಲೇರಿ: ತಣ್ಣೀರುಪಂತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ 2024-25ನೇ ಸಾಲಿನ ವಾರ್ಷಿಕ ಮಹಾಸಭೆ ಆ.9 ರಂದು ಸಂಘದ ಅಧ್ಯಕ್ಷ ಜಯಾನಂದ ಕಲ್ಲಾಪು ಅಧ್ಯಕ್ಷತೆಯಲ್ಲಿ ಸಂಘದ ರೈತ ಸಭಾಭವನದಲ್ಲಿ ನಡೆಯಿತು.

ಅಧ್ಯಕ್ಷ ಜಯಾನಂದ ಕಲ್ಲಾಪು ಮಾತನಾಡಿ ಸಂಘ ವಾರ್ಷಿಕವಾಗಿ ರೂ. 276.82 ಕೋಟಿಗಳ ವ್ಯವಹಾರವನ್ನು ಮಾಡಿ ರೂ. 1.16 ಕೋಟಿ ಲಾಭ ಗಳಿಸಿದೆ. ಸದಸ್ಯರಿಗೆ 12% ಡಿವಿಡೆಂಡ್ ಘೋಷಿಸಲಾಗಿದೆ. ಸಾಲ ವಸೂಲಿ ಶೇ. 100 ಆಗಿವೆ ಎಂದು ತಿಳಿಸಲು ಸಂತೋಷವಾಗುತ್ತದೆ. ಅಲ್ಲದೆ ಕಳೆದ 24 ವರ್ಷಗಳಿಂದ ಸತತವಾಗಿ ಲೆಕ್ಕ ಪರಿಶೋಧನೆ ಯಲ್ಲಿ ‘ಎ’ ಗ್ರೇಡ್ ಪಡೆದಿರುವುದು ಅಲ್ಲದೆ ಸತತ 25 ವರ್ಷಗಳಿಂದ ಲಾಭದಲ್ಲಿ ನಡೆಯುತ್ತಿದೆ. ಈ ಸಾಧನೆಗೆ ಸದಸ್ಯರುಗಳ, ನಿರ್ದೇಶಕರುಗಳ ಸಹಕಾರ ಹಾಗೂ ಮಾರ್ಗದರ್ಶನ ಅಲ್ಲದೆ ನಮ್ಮ ಸಿಬ್ಬಂದಿಗಳ ಪ್ರಾಮಾಣಿಕ ಸೇವೆ ಕಾರಣ ಎಂದು ಹೇಳಿದರು.

ಉಪಾಧ್ಯಕ್ಷ ಸುನೀಲ್ ಅಣಾವು, ನಿರ್ದೇಶಕರಾದ ಜಗದೀಶ್ ಶೆಟ್ಟಿ ಮೈರ, ಕೃಷ್ಣಪ್ಪ ಗೌಡ, ರೋಹಿತ್ ಶೆಟ್ಟಿ, ಸಾಮ್ರಾಟ್, ಸರೋಜಿನಿ, ರಜನಿನಾಥ್, ಸುರೇಶ್, ಶ್ರೀನಿವಾಸ್ ಹಾಗೂ ಜಯವಿಕ್ರಮ್ ಕಲ್ಲಾಪು, ಜಿಲ್ಲಾ ಬ್ಯಾಂಕ್ ಪ್ರತಿನಿಧಿ ಸಿರಾಜುದ್ದೀನ್ ಉಪಸ್ಥಿತರಿದ್ದರು.

ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರಿಗೆ ಸನ್ಮಾನ:
ಡಾ.ಯು.ಪಿ.ರತ್ನಾಕರ ರಾವ್, ಅಶೋಕ್ ಕುಮಾರ್ ಮೂಂಡೂರು, ಅಜಿತ್ ಕುಮಾರ್ ಕೆ. ಎನ್., ನಾರಾಯಣ ಗೌಡ ಉರುವಾಲು, ವಿಜಯ, ಇಸುಬು, ಅವ್ವ ಬಿ., ಬೇಬಿ ಪಿ.ವರ್ಗಿಸ್, ವೀರಪ್ಪ ಗೌಡ, ಲಕ್ಷ್ಮಣ್ ನಾಯ್ಕ್ ಹಲೇಜಿ, ನೇತ್ರಾವತಿ, ಬೋಮ್ಮಯ್ಯ ಬಂಗೇರ, ಡಾ.ವೈಷ್ಣವಿ ಕೆ.ವಿ., ಅಚ್ಚುತ ಆಚಾರ್ಯ, ಮೋಹಿನಿ, ಜನಾರ್ದನ ಗೌಡ ನಾಕಾಲು, ಶಂಕರ್ ನಾರಾಯಣ್ ಭಟ್ ಮತ್ತು ಡೀಕಯ್ಯ ಗೌಡ ಸನ್ಮಾನಿಸಲಾಯಿತು. ಸಂಘದ ವ್ಯಾಪ್ತಿಯ ಉರುವಾಲು, ತಣ್ಣೀರುಪಂತ, ಕರಾಯ ಗ್ರಾಮಗಳಲ್ಲಿನ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ಉನ್ನತ ಮಟ್ಟದಲ್ಲಿ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ವಿತರಿಸಲಾಯಿತು.

ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಸ್ವಾಗತಿಸಿ, ನಿರೂಪಿಸಿದರು. ನಿರ್ದೇಶಕಿ ಜಯಂತಿ ಪಾಲೇದು ವಂದಿಸಿದರು.

Related posts

ಅರಸಿನಮಕ್ಕಿ ಸ.ಪ್ರೌ. ಶಾಲೆ ಹಾಗೂ ಗ್ರಾಮ ಪಂಚಾಯತ್ ನ ಅರಿವು ಕೇಂದ್ರ ಸಹಯೋಗದಲ್ಲಿ ಉಪನ್ಯಾಸ ಕಾರ್ಯಕ್ರಮ

Suddi Udaya

ನ.27-30 :ಎಕ್ಸೆಲ್ ಕಾಲೇಜಿನಲ್ಲಿ ಅಕ್ಷರೋತ್ಸವ ಮತ್ತು ಎಕ್ಸೆಲ್ ಪರ್ಬ ವಿಶೇಷ ಕಾರ್ಯಕ್ರಮ ನಟ ರಮೇಶ್ ಅರವಿಂದ್,ಯೋಗರಾಜ್ ಭಟ್ ಸೇರಿದಂತೆ ಸ್ವಾಮೀಜಿಯವರು, ವಿವಿಧ ಕ್ಷೇತ್ರದ ಗಣ್ಯರು ಭಾಗವಹಿಸಲಿದ್ದಾರೆ ಪತ್ರಿಕಾಗೋಷ್ಠಿಯಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಂದ ಮಾಹಿತಿ

Suddi Udaya

ಬೆಳ್ತಂಗಡಿ: ಡಾ. ಸುಶ್ಮಿತಾ ಸಿ ಎಚ್ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಬೆಳ್ತಂಗಡಿ :ಸ್ವಸ್ತಿಕ್ ಆಟೋ ಗ್ಯಾರೇಜ್ ಗೆ ಬೆಂಕಿ, ಹೊತ್ತಿ ಉರಿದ ಆಟೋ ಮತ್ತು ಸಾಮಾಗ್ರಿ, ಲಕ್ಷಾಂತರ ನಷ್ಟ

Suddi Udaya

ಶಿಶಿಲ ಪರಿಶಿಷ್ಟ ಪಂಗಡ ಕಾಲೋನಿಗೆ ಪೊಲೀಸ್ ಅಧಿಕಾರಿಗಳ ಭೇಟಿ: ಸೈಬರ್ ಅಪರಾಧ, ಪೋಕ್ಸೋ ವಂಚನೆಗಳ ಬಗ್ಗೆ ಜಾಗೃತಿ

Suddi Udaya

ಅಜ್ಞಾತ ಸಂತ ಹರ್ಡೇಕರ್ ಮಂಜಪ್ಪ ಪುಸ್ತಕ ಬಿಡುಗಡೆ

Suddi Udaya
error: Content is protected !!