22.6 C
ಪುತ್ತೂರು, ಬೆಳ್ತಂಗಡಿ
July 23, 2026
ತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟ: ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಮೂಡುಬಿದಿರೆ ತಾಲ್ಲೂಕು ದಕ್ಷಿಣ ಕನ್ನಡ ಹಾಗೂ ಸೈಂಟ್ ಇಗ್ನೇಷಿಯಸ್ ಶಾಲೆ ಪಾಲಡ್ಕ ಇವರ ಸಂಯುಕ್ತ ಆಶ್ರಯದಲ್ಲಿ ಜರಗಿದ ತಾಲ್ಲೂಕು ಮಟ್ಟದ ಕರಾಟೆ ಪಂದ್ಯಾಟದಲ್ಲಿ 17 ವರ್ಷದ ವಯೋಮಿತಿಯ ಬಾಲಕರ ಹಾಗೂ ಬಾಲಕಿಯರ ವಿಭಾಗದಲ್ಲಿ ಎಕ್ಸಲೆಂಟ್ ಆಂಗ್ಲ ಮಾಧ್ಯಮ ಶಾಲೆ ಮೂಡುಬಿದಿರೆಯು ಸಮಗ್ರ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ.


14 ರ ವಿಭಾಗದ ಹಾಗೂ ೧೭ ರ ವಿಭಾಗದ ಬಾಲಕರ ಹಾಗೂ ಬಾಲಕಿಯರ ಪಂದ್ಯಾಟಗಳಲ್ಲಿ ಒಟ್ಟು ಆರು ಚಿನ್ನ, ಎಂಟು ಬೆಳ್ಳಿ ಹಾಗೂ ಐದು ಕಂಚಿನ ಪದಕಗಳನ್ನು ಗಳಿಸಿ ವಿಷೇಶ ಸಾಧನೆಯನ್ನು ಗೈದ ಮಕ್ಕಳನ್ನು ಸಂಸ್ಥೆಯ ಅಧ್ಯಕ್ಷ ಯುವರಾಜ್ ಜೈನ್, ಕಾರ್ಯದರ್ಶಿ ರಶ್ಮಿತಾ ಜೈನ್ ಹಾಗೂ ಮುಖ್ಯೋಪಾಧ್ಯಾಯರಾದ ಶಿವಪ್ರಸಾದ್ ಭಟ್ ಇವರು ಅಭಿನಂದಿಸಿದ್ದಾರೆ.

ತಾಲ್ಲೂಕು ಮಟ್ಟದಿಂದ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡ ವಿದ್ಯಾರ್ಥಿಗಳಾದ ಭಾಂದವಿ ಸಿ, ಸೌಜನ್ಯ ಪಿ ಶೇಷಪ್ಪನವರ್, ಎಮ್ ಜಿ ದೃತಿ ಪಟೇಲ್ , ದೀಕ್ಷಿತ್ ಬಿ ಎನ್, ಜಯಂತ್ ಗೌಡ, ಶ್ರೆಯಸ್ ಸಿ ಲಿಂಗರಾಜು ಮತ್ತು ವಿ ಅಕುಲ್ ಸಾಯಿ.

Related posts

ಲಾಯಿಲ : ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪಿಲಿ ನಲಿಕೆ ಹಾಗೂ ಸನ್ಮಾನ ಕಾರ್ಯಕ್ರಮ

Suddi Udaya

ವಿಧಾನ ಪರಿಷತ್ ಉಪ ಚುನಾವಣೆಗೆ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya

ಎಸ್‌.ಐ.ಟಿ ಕಾರ್ಯಾಚರಣೆಯ ಬಗ್ಗೆ ಸುಳ್ಳು ಮಾಹಿತಿ ಪ್ರಸಾರ: ವಕೀಲ ಮಂಜುನಾಥ ಎನ್. ರವರ ವಿರುದ್ಧ ದೂರು ದಾಖಲು

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯ ಸಿಬ್ಬಂದಿಗಳ ವಾರ್ಷಿಕ ಸಮ್ಮೇಳನ ಉದ್ಘಾಟನೆ

Suddi Udaya

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ

Suddi Udaya

ಧರ್ಮಸ್ಥಳ: ನೇರ್ತನೆ ಪ್ರದೇಶದಲ್ಲಿ ಕಾಡಾನೆ ದಾಳಿ

Suddi Udaya
error: Content is protected !!