22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

ತೆಂಕಕಾರಂದೂರು : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ಆ. 9 ರಂದು ಬೆಳಿಗ್ಗೆ ನಡೆದಿದೆ.

ಆ. 09 ರಂದು ವೇಣೂರು ಪೊಲೀಸ್ ಠಾಣೆಯ ಕೃಷ್ಣ ಕೆ.ಬಿ , ರವರು ಬೀಟ್‌ ವ್ಯಾಪ್ತಿಯ ಗ್ರಾಮದಲ್ಲಿ ಕರ್ತವ್ಯದಲ್ಲಿರುವ ಸಮಯ ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಗಿಂಡಾಡಿ- ಪೆರೊಡಿತ್ತಾಯ ಕಟ್ಟೆ ಸಾರ್ವಜನಿಕ ರಸ್ತೆಯಲ್ಲಿ ಗಿಂಡಾಡಿ ಕಡೆಯಿಂದ ಪೆರೊಡಿತ್ತಾಯಕಟ್ಟೆ ಕಡೆಗೆ ಪಿಕಪ್‌ ವಾಹನ ನಂಬ್ರ KA19 AA 2615 ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಕಂಡು ವಾಹನವನ್ನು ತಡೆದು ನಿಲ್ಲಿಸಿ ಆರೋಪಿ ಪಿಕಪ್‌ ವಾಹನ ಚಾಲಕ ತೆಂಕಕಾರಂದೂರು ಹುಲಿಯಡಿ ಮನೆ ನಿವಾಸಿ ಆರೀಸ್‌ (30) ನಲ್ಲಿ ಯಾವುದೇ ದಾಖಲೆ/ಪರವಾನಿಗೆ ಇರುವುದಿಲ್ಲವಾಗಿಯೂ ಅಲ್ಲದೇ ಸದ್ರಿ ಮರಳನ್ನು ತೆಂಕಕಾರಂದೂರು ಗ್ರಾಮದ ಗಿಂಡಾಡಿ ಡ್ಯಾಂ ಬಳಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶೀಲಿಸಲಾಗಿ ಇದರಲ್ಲಿ ಸುಮಾರು 40 ಬುಟ್ಟಿ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 2,500/- ಹಾಗೂ ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ಗಳಾಗಿರಬಹುದು. ಈ ಬಗ್ಗೆ ಪ್ರಕರಣ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎ.07 -17: ಶ್ರೀ ಕ್ಷೇತ್ರ ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ: ಇಂದು ಮತ್ತು ನಾಳೆ ದೇವಸ್ಥಾನದಲ್ಲಿ ವಿವಿಧ ವೈದಿಕ ಕಾರ್ಯಕ್ರಮ

Suddi Udaya

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya

ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya

ಬೆಳ್ತಂಗಡಿ ಶಾಸಕರ ಕಚೇರಿ “ಶ್ರಮಿಕ” ಕಾರ್ಯಾಲಯ ಉದ್ಘಾಟನೆ: ಶಾಸಕ ಹರೀಶ್ ಪೂಂಜರವರಿಗೆ ವಿವಿಧ ಸಂಘ ಸಂಸ್ಥೆಗಳಿಂದ ಗೌರವಾರ್ಪಣೆ

Suddi Udaya

ಕನ್ಯಾಡಿ 2 ಸ.ಉ.ಹಿ.ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಮಾನ್ವಿ ಎಂ.ಎಸ್ ನೆಲ್ಲಿಂಗೇರಿ ಧ್ವನಿಯಲ್ಲಿ ಮಾಳದ ವರ ಶ್ರೀ ವಿಷ್ಣುಮೂರ್ತಿ” ಎಂಬ ತುಳು ಭಕ್ತಿಗೀತೆ

Suddi Udaya
error: Content is protected !!