July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

ತೆಂಕಕಾರಂದೂರು : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ಆ. 9 ರಂದು ಬೆಳಿಗ್ಗೆ ನಡೆದಿದೆ.

ಆ. 09 ರಂದು ವೇಣೂರು ಪೊಲೀಸ್ ಠಾಣೆಯ ಕೃಷ್ಣ ಕೆ.ಬಿ , ರವರು ಬೀಟ್‌ ವ್ಯಾಪ್ತಿಯ ಗ್ರಾಮದಲ್ಲಿ ಕರ್ತವ್ಯದಲ್ಲಿರುವ ಸಮಯ ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಗಿಂಡಾಡಿ- ಪೆರೊಡಿತ್ತಾಯ ಕಟ್ಟೆ ಸಾರ್ವಜನಿಕ ರಸ್ತೆಯಲ್ಲಿ ಗಿಂಡಾಡಿ ಕಡೆಯಿಂದ ಪೆರೊಡಿತ್ತಾಯಕಟ್ಟೆ ಕಡೆಗೆ ಪಿಕಪ್‌ ವಾಹನ ನಂಬ್ರ KA19 AA 2615 ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಕಂಡು ವಾಹನವನ್ನು ತಡೆದು ನಿಲ್ಲಿಸಿ ಆರೋಪಿ ಪಿಕಪ್‌ ವಾಹನ ಚಾಲಕ ತೆಂಕಕಾರಂದೂರು ಹುಲಿಯಡಿ ಮನೆ ನಿವಾಸಿ ಆರೀಸ್‌ (30) ನಲ್ಲಿ ಯಾವುದೇ ದಾಖಲೆ/ಪರವಾನಿಗೆ ಇರುವುದಿಲ್ಲವಾಗಿಯೂ ಅಲ್ಲದೇ ಸದ್ರಿ ಮರಳನ್ನು ತೆಂಕಕಾರಂದೂರು ಗ್ರಾಮದ ಗಿಂಡಾಡಿ ಡ್ಯಾಂ ಬಳಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶೀಲಿಸಲಾಗಿ ಇದರಲ್ಲಿ ಸುಮಾರು 40 ಬುಟ್ಟಿ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 2,500/- ಹಾಗೂ ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ಗಳಾಗಿರಬಹುದು. ಈ ಬಗ್ಗೆ ಪ್ರಕರಣ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಲಾಯಿಲ ಗ್ರಾಮ ಪಂಚಾಯತ್ ನಲ್ಲಿ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರ

Suddi Udaya

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ವೇಣೂರು ಸರ್ಕಾರಿ ಪ್ರೌಢ ಶಾಲಾ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ

Suddi Udaya

ಸೌತಡ್ಕ ಮಹಾಗಣಪತಿ ದೇವಸ್ಥಾನ: ವ್ಯವಸ್ಥಾಪನಾ ಸಮಿತಿಯ 9 ಸದಸ್ಯ ಸ್ಥಾನಕ್ಕೆ 28 ಮಂದಿ ಅರ್ಜಿ

Suddi Udaya

ಬಕ್ರೀದ್ ಹಬ್ಬದ ಹಿನ್ನೆಲೆ: ಗೋವಂಶ ಅಕ್ರಮ ಸಾಗಾಣಿಕೆ ತಡೆಗೆ ವಿಹಿಂಪ-ಬಜರಂಗದಳ ಬೆಳ್ತಂಗಡಿ ಪ್ರಖಂಡ‌ ಮನವಿ

Suddi Udaya

ಗ್ರಾಮಾಭಿವೃದ್ಧಿ ಯೋಜನೆಯ ಸಹಭಾಗಿತ್ವದೊಂದಿಗೆ ಭಾರತೀಯ ಜೀವ ವಿಮಾ ನಿಗಮದಿಂದ 333 ವಿಮಾ ಗ್ರಾಮಗಳ ಘೋಷಣೆ

Suddi Udaya
error: Content is protected !!