25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ತೆಂಕಕಾರಂದೂರು: ಅಕ್ರಮ ಮರಳು ಸಾಗಟ: ಆರೋಪಿ ಸಹಿತ ಪಿಕಪ್ ವಾಹನ ವಶ

ತೆಂಕಕಾರಂದೂರು : ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ವಾಹನವನ್ನು ವೇಣೂರು ಪೊಲೀಸರು ವಶಪಡಿಸಿಕೊಂಡ ಘಟನೆ ಆ. 9 ರಂದು ಬೆಳಿಗ್ಗೆ ನಡೆದಿದೆ.

ಆ. 09 ರಂದು ವೇಣೂರು ಪೊಲೀಸ್ ಠಾಣೆಯ ಕೃಷ್ಣ ಕೆ.ಬಿ , ರವರು ಬೀಟ್‌ ವ್ಯಾಪ್ತಿಯ ಗ್ರಾಮದಲ್ಲಿ ಕರ್ತವ್ಯದಲ್ಲಿರುವ ಸಮಯ ತೆಂಕಕಾರಂದೂರು ಗ್ರಾಮದ ಗಿಂಡಾಡಿ ಎಂಬಲ್ಲಿ ಗಿಂಡಾಡಿ- ಪೆರೊಡಿತ್ತಾಯ ಕಟ್ಟೆ ಸಾರ್ವಜನಿಕ ರಸ್ತೆಯಲ್ಲಿ ಗಿಂಡಾಡಿ ಕಡೆಯಿಂದ ಪೆರೊಡಿತ್ತಾಯಕಟ್ಟೆ ಕಡೆಗೆ ಪಿಕಪ್‌ ವಾಹನ ನಂಬ್ರ KA19 AA 2615 ನೇದರಲ್ಲಿ ಮರಳು ಸಾಗಾಟ ಮಾಡುತ್ತಿರುವುದನ್ನು ಕಂಡು ವಾಹನವನ್ನು ತಡೆದು ನಿಲ್ಲಿಸಿ ಆರೋಪಿ ಪಿಕಪ್‌ ವಾಹನ ಚಾಲಕ ತೆಂಕಕಾರಂದೂರು ಹುಲಿಯಡಿ ಮನೆ ನಿವಾಸಿ ಆರೀಸ್‌ (30) ನಲ್ಲಿ ಯಾವುದೇ ದಾಖಲೆ/ಪರವಾನಿಗೆ ಇರುವುದಿಲ್ಲವಾಗಿಯೂ ಅಲ್ಲದೇ ಸದ್ರಿ ಮರಳನ್ನು ತೆಂಕಕಾರಂದೂರು ಗ್ರಾಮದ ಗಿಂಡಾಡಿ ಡ್ಯಾಂ ಬಳಿ ಹರಿಯುವ ನದಿಯಿಂದ ತುಂಬಿಸಿ ಸಾಗಾಟ ಮಾಡುತ್ತಿರುವುದಾಗಿ ತಿಳಿಸಿ ತಪ್ಪೊಪ್ಪಿಕೊಂಡಿದ್ದು, ಸದ್ರಿ ವಾಹನವನ್ನು ಪರಿಶೀಲಿಸಲಾಗಿ ಇದರಲ್ಲಿ ಸುಮಾರು 40 ಬುಟ್ಟಿ ಮರಳು ಇದ್ದು ಅದರ ಅಂದಾಜು ಮೌಲ್ಯ ರೂ 2,500/- ಹಾಗೂ ಸಾಗಾಟಕ್ಕೆ ಬಳಸಿದ ವಾಹನದ ಅಂದಾಜು ಮೌಲ್ಯ ರೂ 2 ಲಕ್ಷ ಗಳಾಗಿರಬಹುದು. ಈ ಬಗ್ಗೆ ಪ್ರಕರಣ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಕನ್ಯಾಡಿ ಸೇವಾಭಾರತಿಯಿಂದ ಉಡುಪಿಯಲ್ಲಿ 4 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya

ಭಾರತೀಯ ಮಾಜ್ದೂರು ಸಂಘದ ಜಿಲ್ಲಾ ಕಾರ್ಯಕಾರಿಣಿ ಸಭೆ

Suddi Udaya

ಜ.30: ವೇಣೂರುನಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ರಾಜಕೇಸರಿ ಸಂಘಟನೆಯ ನೇತೃತ್ವದಲ್ಲಿ ಬೃಹತ್ ಉಚಿತ ನೇತ್ರ ತಪಾಸಣೆ ಶಿಬಿರ

Suddi Udaya

ಉಜಿರೆ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕಲಾ ಮತ್ತು ಕರಕುಶಲ ಚಟುವಟಿಕೆ

Suddi Udaya

ಮಡಂತ್ಯಾರು ಮುಖ್ಯರಸ್ತೆಯಲ್ಲಿ ಗುಡ್ಡ ಕುಸಿತ: ಟಾಟಾ ಎಸಿ ವಾಹನ ಜಖಂ; ಅಂಗಡಿಗೆ ಸಂಪೂರ್ಣ ಹಾನಿ

Suddi Udaya
error: Content is protected !!