37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 12 ವಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡಗಳು ಈಗಾಗಲೇ ರಚನೆಯಾಗಿದ್ದು ಆ.7 ರಂದು ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪ್ರಿಯ ಆಗ್ನೇಸ್ ಹಾಗೂ ಅಭಿವೃದ್ಧಿ ಯೋಜನಾಧಿಕಾರಿಗಳು ಹಿರಿಯ ವಿದ್ಯಾರ್ಥಿಗಳ ತಂಡದ ರಚನೆ ಮಹತ್ವ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಂಗನವಾಡಿ ಕೇಂದ್ರದ ಭದ್ರ ಬುನಾದಿಯಾಗಿದೆ. ಅಂಗನವಾಡಿಯ ಅಭಿವೃದ್ಧಿಗೆ ಇಲಾಖೆಯ ಸಹಕಾರದೊಂದಿಗೆ ಹಿರಿಯ ವಿದ್ಯಾರ್ಥಿಗಳ ತಂಡದ ಸಹಕಾರ ಅತ್ಯಗತ್ಯವಾಗಿದೆ ಅಂಗನವಾಡಿ ಉಳಿವಿಕೆಗೆ ಹಿರಿಯ ವಿದ್ಯಾರ್ಥಿಗಳ ತಂಡ ಬಲವಾಗಿ ನಿಲ್ಲಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಸಂದೀಪ್ ರವರ ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ವಿದ್ಯಾರ್ಥಿಗಳು ಅಂಗನವಾಡಿ ಅಭಿವೃದ್ಧಿಗೆ ಕೊಡುಗೆಗಳನ್ನು ನೀಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಮತಿ ವಾಣಿಶ್ರೀ ಹಿರಿಯ ಮೇಲ್ವಿಚಾರಕಿ ಸ್ವಾಗತಿಸಿದರು. ಶ್ರೀಮತಿ ಸುಮನ ಮೇಲ್ವಿಚಾರಕಿ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಅನ್ನಪೂರ್ಣ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು. ಕು.ಲಲಿತ ಮೇಲ್ವಿಚಾರಕಿ ಆಟದ ಮೂಲಕ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಸಿದರು. ಶ್ರೀಮತಿ ಗುಲಾಬಿ ಮೇಲ್ವಿಚಾರಕಿ ವಂದಿಸಿದರು.

Related posts

ನ.13: ದೀಪಾವಳಿ ಹಬ್ಬದ ಪ್ರಯುಕ್ತ ಕುಸಲ್ದ ಜವನೆರ್ ಬದ್ಯಾರು – ಶಿರ್ಲಾಲು ಇದರ ವತಿಯಿಂದ 5ನೇ ವರ್ಷದ ‘ಕೆಸರ್ ಡೊಂಜಿ ಕುಸಲ್ದ ಗೊಬ್ಬು’ ಕಾರ್ಯಕ್ರಮ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಬಳಿ ನಿವಾಸಿ ಶ್ರೀಮತಿ ಕಮಲ ನಿಧನ

Suddi Udaya

ಬಂದಾರು : ಒಂದೇ ವರ್ಷದ ಅಡಿಕೆ ಸಸಿಯಲ್ಲಿ ಮೂಡಿದ ಚೊಚ್ಚಲ ಹಿಂಗಾರ; ಶಾಲಾ ತೋಟದಲ್ಲಿ ಹೀಗೊಂದು ಪ್ರಕೃತಿ ವೈಚಿತ್ರ್ಯ

Suddi Udaya

ಧರ್ಮಸ್ಥಳ ವಿರುದ್ದ ಅಪಪ್ರಚಾರ, ಷಡ್ಯಂತ್ರಗಳ ಹಿಂದೆ ಇರುವ ಕಾಣದ ಕೈಗಳನ್ನು ಸೂಕ್ತ ತನಿಖೆಗೆ ಆಗ್ರಹಿಸಿ ಕೇಂದ್ರ ಗೃಹ ಸಚಿವ ಅಮಿತ್ ಶಾರವರನ್ನು ಭೇಟಿ ಮಾಡಿದ ರಾಜ್ಯ ಬಿಜೆಪಿ ನಾಯಕರ ನಿಯೋಗ

Suddi Udaya

ಕುತ್ಲೂರು: ದರ್ಖಾಸು ಮನೆಯ ಶ್ರೀಮತಿ ಅಪ್ಪಿ ನಿಧನ

Suddi Udaya
error: Content is protected !!