23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನೆಯ ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನೆ

ಬೆಳ್ತಂಗಡಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಶಿಶು ಅಭಿವೃದ್ಧಿ ಯೋಜನೆ ಬೆಳ್ತಂಗಡಿ ಯೋಜನಾ ವ್ಯಾಪ್ತಿಯ 12 ವಲಯದಲ್ಲಿ ಹಿರಿಯ ವಿದ್ಯಾರ್ಥಿಗಳ ತಂಡಗಳು ಈಗಾಗಲೇ ರಚನೆಯಾಗಿದ್ದು ಆ.7 ರಂದು ತಾಲೂಕು ಮಟ್ಟದ ಹಳೆ ವಿದ್ಯಾರ್ಥಿ ಸಂಘದ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಪ್ರಿಯ ಆಗ್ನೇಸ್ ಹಾಗೂ ಅಭಿವೃದ್ಧಿ ಯೋಜನಾಧಿಕಾರಿಗಳು ಹಿರಿಯ ವಿದ್ಯಾರ್ಥಿಗಳ ತಂಡದ ರಚನೆ ಮಹತ್ವ ಮಕ್ಕಳ ಸರ್ವತೋಮುಖ ಬೆಳವಣಿಗೆ ಅಂಗನವಾಡಿ ಕೇಂದ್ರದ ಭದ್ರ ಬುನಾದಿಯಾಗಿದೆ. ಅಂಗನವಾಡಿಯ ಅಭಿವೃದ್ಧಿಗೆ ಇಲಾಖೆಯ ಸಹಕಾರದೊಂದಿಗೆ ಹಿರಿಯ ವಿದ್ಯಾರ್ಥಿಗಳ ತಂಡದ ಸಹಕಾರ ಅತ್ಯಗತ್ಯವಾಗಿದೆ ಅಂಗನವಾಡಿ ಉಳಿವಿಕೆಗೆ ಹಿರಿಯ ವಿದ್ಯಾರ್ಥಿಗಳ ತಂಡ ಬಲವಾಗಿ ನಿಲ್ಲಬೇಕು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಹಿರಿಯ ವಿದ್ಯಾರ್ಥಿಗಳ ಪ್ರತಿನಿಧಿಯಾಗಿ ಸಂದೀಪ್ ರವರ ಕಾರ್ಯಕ್ರಮದ ಉದ್ಘಾಟಕರಾಗಿ ಹಿರಿಯ ವಿದ್ಯಾರ್ಥಿಗಳು ಅಂಗನವಾಡಿ ಅಭಿವೃದ್ಧಿಗೆ ಕೊಡುಗೆಗಳನ್ನು ನೀಡಬಹುದಾಗಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಶ್ರೀಮತಿ ವಾಣಿಶ್ರೀ ಹಿರಿಯ ಮೇಲ್ವಿಚಾರಕಿ ಸ್ವಾಗತಿಸಿದರು. ಶ್ರೀಮತಿ ಸುಮನ ಮೇಲ್ವಿಚಾರಕಿ ಪ್ರಸ್ತಾವಿಕವಾಗಿ ಮಾತನಾಡಿದರು. ಶ್ರೀಮತಿ ಅನ್ನಪೂರ್ಣ ಮೇಲ್ವಿಚಾರಕಿ ಕಾರ್ಯಕ್ರಮ ನಿರೂಪಿಸಿದರು. ಕು.ಲಲಿತ ಮೇಲ್ವಿಚಾರಕಿ ಆಟದ ಮೂಲಕ ವಿದ್ಯಾರ್ಥಿಗಳನ್ನು ಪರಿಚಯ ಮಾಡಿಸಿದರು. ಶ್ರೀಮತಿ ಗುಲಾಬಿ ಮೇಲ್ವಿಚಾರಕಿ ವಂದಿಸಿದರು.

Related posts

ಬೆಳ್ತಂಗಡಿ ಸಮಾಜ ಮಂದಿರದಲ್ಲಿ ಭಗವದ್ಗೀತ ಪ್ರವಚನ ಸಪ್ತಾಹಕ್ಕೆ ಚಾಲನೆ:

Suddi Udaya

ಕಲ್ಮಂಜ: ರೋಟರಿ ಕ್ಲಬ್ ಬೆಳ್ತಂಗಡಿ ವತಿಯಿಂದ ಗಾಲಿಕುರ್ಚಿ ಹಸ್ತಾಂತರ

Suddi Udaya

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ಹೆಗ್ಗಡೆ ಹಾಗೂ ಕನ್ಯಾಡಿ ಶ್ರೀ ಭೇಟಿ

Suddi Udaya

ನಿಡ್ಲೆ : ಕುದ್ರಾಯ ಓಡದಕೊಟ್ಯದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದ ಮರ

Suddi Udaya

ವೇಣೂರು: ರಾಜೇಶ್ ಆಚಾರ್ಯ ನೇಣು ಬಿಗಿದು ಆತ್ಮಹತ್ಯೆ

Suddi Udaya

ಸರ್ಕಾರಿ ಕರ್ತವ್ಯದ ವೇಳೆ ಸರ್ಕಾರಿ ಅಧಿಕಾರಿಗಳ ಮೇಲೆ ಹಲ್ಲೆಗೆ ಯತ್ನ ಖಂಡನೀಯ: ಜಯಕೀರ್ತಿ ಜೈನ್

Suddi Udaya
error: Content is protected !!