ಧರ್ಮಸ್ಥಳ: ಇಲ್ಲಿಯ ಬೋಳಿಯರ್ ನಲ್ಲಿ ಎರಡು ಮೂರು ವಾರದಿಂದ ಬೀಡುಬಿಟ್ಟಿರುವ ಕಾಡಾನೆಯು ಇಂದು(ಆ.9) ಬೆಳಿಗ್ಗೆ ಮತ್ತೆ ರಸ್ತೆಯ ಬದಿ ಪ್ರತ್ಯಕ್ಷವಾಗಿದೆ.

ಶಾಲಾ ಮಕ್ಕಳು ಬಸ್ ಗೆ ಕಾಯುತ್ತಿರುವ ವೇಳೆ ಕಾಡಾನೆಯು ಪ್ರತ್ಯಕ್ಷವಾಗಿದ್ದು ಯಾವುದೇ ತೊಂದರೆ ಮಾಡದೆ ಬೋಳಿಯಾರ್ ನಿಂದ ಮುಳಿಕ್ಕರ್ ಆಗಿ ಪುದುವೆಟ್ಟು ಕಡೆ ತೆರಲಿದೆ ಎನ್ನಲಾಗಿದೆ.

ರಾತ್ರಿ ಹೊತ್ತು ಕಾಣಿಸಿಕೊಳ್ಳುತ್ತಿದ್ದ ಕಾಡಾನೆಗಳು ಇದೀಗ ಹಗಲು ಹೊತ್ತು ಕಾಣಿಸುತ್ತಿರುವುದರಿಂದ ಶಾಲಾ ಮಕ್ಕಳಿಗೆ ಹಾಗೂ ಜನರಿಗೆ ಓಡಾಡಲು ಭಯಪಡುವಂತ ಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಅರಣ್ಯ ಇಲಾಖೆಯವರು ಕ್ರಮ ಕೈಗೊಳ್ಳಬೇಕಾಗಿ ಸ್ಥಳೀಯರು ಆಗ್ರಹಿಸಿದ್ದಾರೆ.











