September 6, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ಶಾಸಕ ಹರೀಶ್ ಪೂಂಜ ಹಾಗೂ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಕುಸಿತಗೊಂಡಿದ್ದ ಮನೆಯನ್ನು ವೀಕ್ಷಿಸಿದರು.

ಮನೆಯ ಕೂದಲೆಳೆಯ ಅಂತರದಲ್ಲೇ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಕಂಪ್ರೆಸರ್ ಹಾಗೂ ಬ್ರೇಕರ್ ಮೂಲಕ ಕಪ್ಪು ಕಲ್ಲು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ಹಾಗೂ ವೈಬ್ರೇಟರ್ ಒತ್ತಡಕ್ಕೆ ಕಳೆದ ಒಂದು ವರುಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಮೂಡಿದ್ದು ಈ ಬಗ್ಗೆ ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರಕ್ಕೆ ಮನೆಯವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆಯೇ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಕೊಕ್ಕಡ: ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ಕಾಡು ಎಮ್ಮೆ: ಸವಾರರಿಗೆ ಗಾಯ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಬೆಳ್ತಂಗಡಿ ಗ್ರಾಮ ಸಮಿತಿ ಶಿಶಿಲ ಇದರ ವಾರ್ಷಿಕ ಕಾರ್ಯಕ್ರಮ

Suddi Udaya

ಕಣಿಯೂರು ಕುಲಾಲ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ.

Suddi Udaya

ಉಜಿರೆ: ಗುರಿಪಳ್ಳ ಕ್ರಾಸ್ ಬಳಿ ಗುಡ್ಡಕ್ಕೆ ಬೆಂಕಿ

Suddi Udaya

ಪಟ್ರಮೆ ಅನಾರು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ಕೊರತೆ: ಶಾಲಾ ಮಕ್ಕಳಿಗೆ ಪಾಠ ಮಾಡಲು ಶಿಕ್ಷಕರ ಇಲ್ಲಂದತಹ ಪರಿಸ್ಥಿತಿ: ಮಕ್ಕಳನ್ನು ಶಾಲೆಗೆ ಕಳುಹಿಸದೇ ಪೋಷಕರ ಪ್ರತಿಭಟನೆ

Suddi Udaya

ಮಾಲಾಡಿ: ಅಪ್ರಾಪ್ತ ಬಾಲಕ ಸವಾರಿ ಮಾಡುತ್ತಿದ್ದ ಬೈಕ್ ಡಿಕ್ಕಿ: ರಸ್ತೆ ದಾಟುತ್ತಿದ್ದ ಶಾಲಾ ಬಾಲಕನಿಗೆ ಗಾಯ

Suddi Udaya
error: Content is protected !!