22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಸಂಘ-ಸಂಸ್ಥೆಗಳುಸಮಸ್ಯೆ

ಲಾಯಿಲ ಗ್ರಾ.ಪಂ. ಉಪಾಧ್ಯಕ್ಷೆ ಸುಗಂಧಿ ಜಗನ್ನಾಥ್ ರವರ ಮನೆ ಕುಸಿತ ಸಂಸದ ಬ್ರಿಜೇಶ್ ಚೌಟ & ಶಾಸಕ ಹರೀಶ್ ಪೂಂಜ ಭೇಟಿ

ಬೆಳ್ತಂಗಡಿ: ಲಾಯಿಲ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್ ಇವರ ಮನೆ ತಡ ರಾತ್ರಿ 1.30ಕ್ಕೆ ಕುಸಿದಿರುವ ಘಟನೆ ನಡೆದಿರುತ್ತದೆ.

ಈ ಸಂದರ್ಭದಲ್ಲಿ ಮನೆಯಲ್ಲಿ ಸುಗಂಧಿ ಇವರ ಪತಿ ಜಗನ್ನಾಥ್, ಮಗ ಅನಿಲ್, ಸೊಸೆ ಮಧುರ ಪುಟ್ಟ ಮಕ್ಕಳು ಮಲಗಿದ್ದರು. ಗೋಡೆ ಬಿರುಕು ಬಿಟ್ಟ ಶಬ್ದ ಕೇಳಿ ಮನೆಯವರು ಎಚ್ಚರ ಗೊಂಡಿದ್ದರಿಂದ ಮನೆಯ ಸದಸ್ಯರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕುಸಿತದಿಂದ ಮನೆಯ ನಿತ್ಯ ಬಳಕೆಯ ಸಾಮಗ್ರಿಗಳು, ಎಲೆಕ್ಟ್ರಾನಿಕ್ ವಸ್ತುಗಳಿಗೆ ಹಾನಿಯಾಗಿವೆ. ವಿಷಯ ತಿಳಿದ ಶಾಸಕ ಹರೀಶ್ ಪೂಂಜ ಹಾಗೂ ಸಂಸದ ಬ್ರಿಜೇಶ್ ಚೌಟ ಭೇಟಿ ನೀಡಿ ಕುಸಿತಗೊಂಡಿದ್ದ ಮನೆಯನ್ನು ವೀಕ್ಷಿಸಿದರು.

ಮನೆಯ ಕೂದಲೆಳೆಯ ಅಂತರದಲ್ಲೇ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ನಡೆಯುತ್ತಿದ್ದು ಕಂಪ್ರೆಸರ್ ಹಾಗೂ ಬ್ರೇಕರ್ ಮೂಲಕ ಕಪ್ಪು ಕಲ್ಲು ತೆರವು ಮಾಡುತ್ತಿದ್ದ ಸಂದರ್ಭದಲ್ಲಿ ಹಾಗೂ ವೈಬ್ರೇಟರ್ ಒತ್ತಡಕ್ಕೆ ಕಳೆದ ಒಂದು ವರುಷಗಳ ಹಿಂದೆಯೇ ಗೋಡೆಯಲ್ಲಿ ಬಿರುಕು ಮೂಡಿದ್ದು ಈ ಬಗ್ಗೆ ಸಂಬಂಧ ಪಟ್ಟ ಹೆದ್ದಾರಿ ಪ್ರಾಧಿಕಾರಕ್ಕೆ ಮನೆಯವರು ಲಿಖಿತ ರೂಪದಲ್ಲಿ ದೂರು ನೀಡಿದ್ದರು. ಪ್ರಾಧಿಕಾರದ ಅಧಿಕಾರಿಗಳು ಈ ಹಿಂದೆಯೇ ಸ್ಥಳಕ್ಕೆ ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Related posts

ಸಂಪೂರ್ಣ ಹಾಳಾದ ಧರ್ಮಸ್ಥಳ-ಮುಳಿಕ್ಕಾರು ರಸ್ತೆ: ಶಾಲಾ ಮಕ್ಕಳು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣ, ಅಲ್ಲಲ್ಲಿ ಹೂತು ಹೋಗುವ ವಾಹನಗಳು

Suddi Udaya

ಉಜಿರೆಯಲ್ಲಿ ನ್ಯೂ ತ್ರಿಲೋಕ್ ಡ್ಯಾನ್ಸ್ ಇನ್ಸ್ಟಿಟ್ಯೂಟ್ & ಕಾಸ್ಯೂಮ್ ಸೆಂಟರ್ ಪ್ರಾರಂಭೋತ್ಸವ ಡ್ಯಾನ್ಸ್ ತರಭೇತಿ ಪಡೆಯುವವರಿಗೆ ತ್ರಿಲೋಕ್ ಉತ್ತಮ ವೇದಿಕೆ- ಸುಧೀರ್ ಜೈನ್

Suddi Udaya

ಮೂಡುಬಿದಿರೆ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರ ಸಂಘದ 35ನೇ ಶಾಖೆ ಉದ್ಘಾಟನೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಜಿಲ್ಲಾ ಪ್ರಥಮ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ವಿಜಯೇಂದ್ರ ಟಿ.ಎಚ್ ರವರಿಗೆ ಬೀಳ್ಕೊಡುಗೆ

Suddi Udaya

ಧರ್ಮಸ್ಥಳ: ಎಸ್.ಕೆ. ಗೋಲ್ಡ್ ಸ್ಮಿತ್ ಇಂಡಸ್ಟ್ರಿಯಲ್ ಕೋ ಆಪರೇಟಿವ್ ಸೊಸೈಟಿಯಿಂದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
error: Content is protected !!