23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಯೂಟ್ಯೂಬರ್‌ಗಳ ಆರೋಗ್ಯ ವಿಚಾರಿಸಿದ ಬೆಳ್ತಂಗಡಿ ಡಿ.ಎಸ್.ಎಸ್(ಅಂಬೇಡ್ಕರ್‌ವಾದ) ನಿಯೋಗ

ಬೆಳ್ತಂಗಡಿ : ಆ.6 ರಂದು ಧಮ೯ಸ್ಥಳದ ಪಾಂಗಳ ಎಂಬಲ್ಲಿ ನಡೆದ ಅಹಿತಕರ ಘಟನೆಯಲ್ಲಿ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಯೂಟ್ಯೂಬರ್‌ಗಳನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ) ಬೆಳ್ತಂಗಡಿ ತಾಲೂಕು ಪದಾಧಿಕಾರಿಗಳು ಮತ್ತು ಮೈಸೂರು ವಿಭಾಗೀಯ ಪದಾಧಿಕಾರಿಗಳ ನಿಯೋಗ ಭೇಟಿ ಮಾಡಿ ಆರೋಗ್ಯ ವಿಚಾರಿಸಿ ಧೈರ್ಯ ತುಂಬಿದರು.

ತನಿಖೆಯ ಹಾದಿ ತಪ್ಪಿಸುವ ದುರುದುದ್ದೇಶದಿಂದ ಸ್ಥಳೀಯ ಕಿಡಿಗೇಡಿಗಳು ಚೆನ್ನರಾಯಪಟ್ಟಣದ ದಲಿತ ಸಮುದಾಯದ ಯೂಟ್ಯೂಬರ್ ಅಭಿಷೇಕ್ ಸಹಿತ ನಾಲ್ಕು ಮಂದಿಗಳ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆಯೊಡ್ಡಿದ್ದಾರೆ ಹಾಗೂ ಕ್ಯಾಮೆರಾ, ವಾಹನ ಇನ್ನಿತರ ಸಲಕರಣೆಗಳಿಗೆ ಹಾನಿ ಮಾಡಿದ್ದಾರೆ. ಸಂವಿಧಾನದ ನಾಲ್ಕನೇಯ ಅಂಗವೆಂದೇ ಕರೆಯಲ್ಪಡುವ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ಮಾಡಿರುವ ಘಟನೆಯನ್ನು ದಲಿತ ಸಂಘರ್ಷ ಸಮಿತಿಯ ಪದಾಧಿಕಾರಿಗಳು ಖಂಡಿಸಿದರು.

ಗಾಯಗೊಂಡ ಇತರೆ ಮಾಧ್ಯಮದವರ ಆರೋಗ್ಯ ವಿಚಾರಿಸಿ ಅವರಿಗೆ ನ್ಯಾಯ ಒದಗಿಸುವ ಸಲುವಾಗಿ ಈ ಬಗ್ಗೆ ಪೋಲಿಸ್ ಇಲಾಖೆಯ ಹಿರಿಯ ಅಧಿಕಾರಿಗಳನ್ನು ಭೇಟಿ ಮಾಡಲಾಗುವುದು ಎಂದು ದಸಂಸ ನಾಯಕರು ತಿಳಿಸಿದರು. ನಿಯೋಗದಲ್ಲಿ ಬೆಳ್ತಂಗಡಿಯ ಪ್ರಮುಖರಾದ ಶೇಖರ್ ಕುಕ್ಕೇಡಿ, ರಮೇಶ್ ಆರ್, ಬಿ.ಕೆ.ವಸಂತ್ ಬೆಳ್ತಂಗಡಿ, ವೆಂಕಣ್ಣ ಕೊಯ್ಯೂರು, ನೇಮಿರಾಜ್ ಕಿಲ್ಲೂರು ಶ್ರೀಧರ್ ಎಸ್ ಕಳೆಂಜ, ಶಂಕರ್ ಮಾಲಾಡಿ, ಪ್ರಭಾಕರ್ ಶಾಂತಿಕೋಡಿ, ಹರೀಶ್ ಲಾಯಿಲ,ಕೂಸ ಅಳದಂಗಡಿ, ಸುಂದರ ನಾಲ್ಕೂರು, ಪುಷ್ಪರಾಜ್ ಶಿರ್ಲಾಲ್, ಸಂದೀಪ್ ಹೊಸಪಟ್ನ, ಶೇಖರ್ ಮಾಲಾಡಿ, ರಮೇಶ್ ಗಾಂಧಿನಗರ ಮತ್ತಿತರ ಪದಾಧಿಕಾರಿಗಳು ಭಾಗವಹಿಸಿದ್ದರು.

Related posts

ವೇಣೂರು: ಸುದೆರ್ದು ನಿಲಯದ ಶ್ರೀಮತಿ ಗೀತಾ ನಿಧನ

Suddi Udaya

ಉಜಿರೆಯಲ್ಲಿ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಪದ್ಮುಂಜ: ಸ. ಹಿ. ಪ್ರಾ. ಶಾಲಾಭಿವೃದ್ಧಿ ಸಮಿತಿಯ ನೂತನ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ ಆಯ್ಕೆ

Suddi Udaya

ಕಳೆ ತೆಗೆಯುವ ಯಂತ್ರಕ್ಕೆ ಸಿಲುಕಿ ಎದೆಗೆ ಬಡಿದ ರಬ್ಬರ್ ಕಪ್‌ನ ಸರಿಗೆ: ಕಾಯರ್ತಡ್ಕ ನಿವಾಸಿ ಕೊರಗಪ್ಪ ಗೌಡ ಸಾವು

Suddi Udaya

ಸೆ.16: ಲಾಯಿಲ ವಿಶ್ವಕರ್ಮ ಸಭಾಭವನದಲ್ಲಿ ಶ್ರೀ ವಿಶ್ವಕರ್ಮ ಯಜ್ಞ ಮತ್ತು ಪೂಜೆ

Suddi Udaya

ಮದ್ದಡ್ಕ: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
error: Content is protected !!