September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಹೊಸಂಗಡಿ : ಗುಂಡೂರಿ ಒಕ್ಕೂಟದ ವತಿಯಿಂದ ಶ್ರೀ ವರಮಹಾಲಕ್ಷ್ಮಿ ಪೂಜೆ

ಗುಂಡೂರಿ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜಾ ಸಮಿತಿ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಗುರುವಾಯನಕೆರೆ ಹೊಸಂಗಡಿ ವಲಯ ಗುಂಡೂರಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯು ಲಕ್ಷ್ಮಿ ನಾರಾಯಣ ಕಾರಂತ ಇವರ ಪೌರೋಹಿತ್ಯದಲ್ಲಿ ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಸಿದ್ದಕಟ್ಟೆ ಗುಣಶ್ರೀ ಶಾಲೆಯ ಯೋಗ ಶಿಕ್ಷಕಿ ಶ್ರೀಮತಿ ಶಶಿಕಲಾ ರವರು ಸಂಸ್ಕೃತಿ, ಸಂಸ್ಕಾರ ಬಗ್ಗೆ ಧಾರ್ಮಿಕ ಉಪನ್ಯಾಸ ನೀಡಿದರು ಹಾಗೂ ಶ್ರೀ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ರಮೇಶ್ ಪೂಜಾರಿ ಯೋಜನೆಯಿಂದ ಅದ ಸಾಮಾಜಿಕ ಹಾಗೂ ಆರ್ಥಿಕ ಬದಲಾವಣೆ ಬಗ್ಗೆ ತಿಳಿಸಿದರು, ಗ್ರಾಮ ಪಂಚಾಯತ್ ಅಧ್ಯಕ್ಷ ಪ್ರವೀಣ್ ಚಂದ್ರ ಜೈನ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಮಾಜಿ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ ವೀಣಾ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿ ಅಧ್ಯಕ್ಷರಾದ ಸಂಗೀತ ಹಾಗೂ ಉಷಾ ರವರು ಹಾಗೂ ಒಕ್ಕೂಟ ಅಧ್ಯಕ್ಷರು ಸದಾನಂದ ಪೂಜಾರಿ, ಹಾಗೂ ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಸೇಸಪ್ಪ ಪೂಜಾರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಸಮಿತಿ ಕಾರ್ಯದರ್ಶಿ ಸೌಜನ್ಯ ಜೈನ ವರದಿ ವಾಚಿಸಿದರು ಒಕ್ಕೂಟ ಕಾರ್ಯದರ್ಶಿ ಪ್ರವೀಣ್ ಆಚಾರ್ಯ ಸ್ವಾಗತಿಸಿ ಸೇವಾಪ್ರತಿನಿಧಿ ಹರೀಶ್ ಬಾಡರು ರವರು ಧನ್ಯವಾದ ವಿತ್ತರು.

Related posts

ರಾಜ್ಯಮಟ್ಟದ ಸ್ಪೆಲ್ ಬಿ ಪರೀಕ್ಷೆ: ಸೈಂಟ್ ಮೇರಿಸ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನ ಆಚರಣೆ

Suddi Udaya

ವೇಣೂರು ಸೊಸೈಟಿ ಅಧ್ಯಕ್ಷ ಸುಂದರ ಹೆಗ್ಡೆ ಅವರಿಗೆ ಗೌರವಾರ್ಪಣೆ

Suddi Udaya

ಕನ್ಯಾಡಿ : ಹಿಂದೂ ಧಾರ್ಮಿಕ ಸೇವಾ ಸಮಿತಿಯಿಂದ ಚಿಕಿತ್ಸಾ ನೆರವು

Suddi Udaya

ಎಸ್.ಡಿ.ಎಂ ಕಾಲೇಜಿನ ರಾಜ್ಯ ಶಾಸ್ತ್ರ ವಿದ್ಯಾರ್ಥಿಗಳಿಂದ ಗ್ರಾಮ ಸ್ವರಾಜ್ ಕಾರ್ಯಕ್ರಮ

Suddi Udaya

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya
error: Content is protected !!