22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನ ಕಾರ್ಯಕ್ರಮ

ಉಜಿರೆ : ಎಸ್. ಡಿ. ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು. ಶಾಲೆಯ ಮೂಲೆ ಮೂಲೆಯಲ್ಲೂ ತುಳುನಾಡಿಗೆ ಸಂಬಂಧಪಟ್ಟಂತ ವಿವಿಧ ಭಕ್ಷ ಭೋಜ್ಯ, ಆಟಿಯಲ್ಲಿ ಆಡುವಂತಹ ವಿಶೇಷ ಆಟಗಳು ರಾರಾಜಿಸಿದವು.

ತುಳುನಾಡಿನ ಕಲೆ, ಸಂಸ್ಕೃತಿ, ಸಂಸ್ಕಾರ, ಆಚಾರ-ವಿಚಾರ, ಆಹಾರ, ಆರೋಗ್ಯವನ್ನು ಆಟಿ ದಿನಗಳಲ್ಲಿ ಹೇಗೆ ಕಾಯ್ದುಕೊಳ್ಳಬೇಕು ಎಂಬ ವಿಚಾರಗಳನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ತುಳು ನಾಡಿಗೆ ಹಾಗೂ ತುಳು ಭಾಷೆಗೆ ಸಂಬಂಧಪಟ್ಟಂತಹ ಹಾಡು, ಗಾದೆ, ಸಂಧಿ ಪಾಡ್ದನ, ನೃತ್ಯ, ಭಿತ್ತಿ ಪತ್ರಿಕೆ, ಆಟಿ ತಿಂಗಳಿನ ತಿನಿಸುಗಳ ಪ್ರದರ್ಶನವನ್ನು ಹಾಗೂ ದೇಸಿ ಆಟಗಳನ್ನು ಸಹ ಏರ್ಪಡಿಸಲಾಗಿತ್ತು.

ಶಾಲಾ ಪ್ರಾಂಶುಪಾಲ ಮನ್ಮೋಹನ್ ನಾಯ್ಕ್ ಕೆ.ಜಿ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ವಿದ್ಯಾರ್ಥಿಗಳಾದ ಆರ್ಯಮನ್ ಹಾಗೂ ತ್ರಿಜಲ್ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ಪೃಥ್ವಿ ವಂದಿಸಿದರು.

Related posts

ಬಿಜೆಪಿ ತನ್ನ ಗುರಿಯನ್ನು ಮೀರಿ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದಲ್ಲಿ ಗೆಲುವನ್ನು ಸಾಧಿಸಲಿದೆ: ಹರೀಶ್ ಪೂಂಜ

Suddi Udaya

ಬಳಂಜ: ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಮೂಡುಕೋಡಿ ಶೀನ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ನ.4: ಭಜಕ ಸಹೋದರಿಯರ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವವರ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ಪ್ರತಿಭಟನೆ

Suddi Udaya

ಜು. 12: ಉಜಿರೆಯಲ್ಲಿ ಮೆಗಾ ‘ರೈನಾಥಾನ್–2026’

Suddi Udaya

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ಅಧ್ಯಕ್ಷರಾಗಿ ರಾಜೇಶ್ವರಿ, ಉಪಾಧ್ಯಕ್ಷರಾಗಿ ಚಂದ್ರಾವತಿ ಅವಿರೋಧ ಆಯ್ಕೆ

Suddi Udaya
error: Content is protected !!