September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ‘ಜೀವನ ಕೌಶಲ’ ಕಾರ್ಯಾಗಾರ

ಉಜಿರೆ: ಹಿಂದಿನ ಕಾಲದ ಜನರು ಶಿಕ್ಷಣವಂಚಿತರಾದರೂ ಸಂಸ್ಕಾರವಂತರಾಗಿದ್ದರು. ಆದರೆ ಪ್ರಸ್ತುತ ಕಾಲದ ಜನರು ಸುಶಿಕ್ಷಿತರಾದರೂ ಅವರಲ್ಲಿ ಸಂಸ್ಕಾರದ ಕೊರತೆ ಕಂಡು ಬರುತ್ತಿದೆ ಎಂದು ವೇಣೂರಿನ ಎಸ್.ಡಿ.ಎಂ. ಕೈಗಾರಿಕಾ ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿ ಪದ್ಮ ಪ್ರಸಾದ್ ಖೇದ ವ್ಯಕ್ತಪಡಿಸಿದರು.

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಆ.8 ಸಂಸ್ಥೆಯ ವಿಂಶತಿ ಹಿನ್ನೆಲೆ ಕಾರ್ಯಕ್ರಮ ಸರಣಿ ಭಾಗವಾಗಿ ಆಯೋಜಿಸಿದ್ದ ಒಂದು ದಿನದ ‘ಜೀವನ ಕೌಶಲ’ ಕಾರ್ಯಾಗಾರದಲ್ಲಿ ಅವರು ಸಂಪನ್ಮೂಲ ವ್ಯಕ್ತಿಯಾಗಿದ್ದರು.

“ಹಿಂದೆ ಜನರು ಸಂಸ್ಕಾರವಂತರಾಗಿದ್ದರಿಂದ ಅಹಿತಕರ ಘಟನೆಗಳು ಘಟಿಸುತ್ತಿರಲಿಲ್ಲ. ಆದರೆ ಇಂದು ಉನ್ನತ ಶಿಕ್ಷಣ ಪಡೆದವರೇ ಭಯೋತ್ಪಾದನೆಯಂತಹ ಕುಕೃತ್ಯಗಳಲ್ಲಿ ತೊಡಗಿರುವುದು ಕಂಡು ಬರುತ್ತಿದೆ. ಸಂಸ್ಕಾರಯುತ ಶಿಕ್ಷಣದ ಆವಶ್ಯಕತೆ ಎದ್ದು ಕಾಣುತ್ತಿದೆ” ಎಂದರು.

ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲ ವಿ. ಪ್ರಕಾಶ್ ಕಾಮತ್ ಉಪಸ್ಥಿತರಿದ್ದರು.
ಕಾರ್ಯಕ್ರಮ ಸಂಯೋಜಕಿ, ಕಿರಿಯ ತರಬೇತಿ ಅಧಿಕಾರಿ ಸಂದ್ಯಾ ಸ್ವಾಗತಿಸಿದರು.

Related posts

ಪುತ್ತೂರು ಮಾತೆರ್ಲ ಒಂಜೇ ವಾಟ್ಸ್ ಆಫ್ ಗ್ರೂಪ್: ಸಾರ್ವಜನಿಕ ಚಿತ್ರಕಲಾ ಸ್ಪರ್ಧೆಯ ಬಹುಮಾನ ವಿತರಣೆ

Suddi Udaya

ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರ ಕ್ಷೇತ್ರದ ಚುನಾವಣೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂರಿಂದ ಮತದಾನ

Suddi Udaya

ವಿಧಾನಪರಿಷತ್ತು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಯಾಗಿ ರಾಜು ಪೂಜಾರಿ

Suddi Udaya

ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಬೇಸಿಗೆ ಶಿಬಿರದ ಸಮಾರೋಪ

Suddi Udaya

ಬೆಳ್ತಂಗಡಿ ಸಂಜೀವಿನಿ ಸಂಸ್ಥೆಯಿಂದ ಆಹಾರ ಸಾಮಾಗ್ರಿಗಳ ಕಿಟ್ ವಿತರಣೆ

Suddi Udaya

ಮಚ್ಚಿನ ಗ್ರಾಮದ ಪೇಟೆಯ ಶೌಚಾಲಯದ ಆದೋಗತಿ.. ಉಪಯೋಗಕ್ಕಿಲ್ಲದ ಕಟ್ಟಡ-ತುಕ್ಕು ಹಿಡಿದ ಬಾಗಿಲು…

Suddi Udaya
error: Content is protected !!