July 23, 2026
ಚಿತ್ರ ವರದಿತಾಲೂಕು ಸುದ್ದಿ

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ

ಉಜಿರೆಯ ಎಸ್. ಡಿ. ಎಂ. ಡಿ. ಎಡ್ ಕಾಲೇಜಿನಲ್ಲಿ ಆ.08 ರಂದು ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಉದ್ಘಾಟನಾ ಕಾರ್ಯಕ್ರಮ ನಡೆಯಿತು.

ಮುಖ್ಯ ಅತಿಥಿ ನಿವೃತ್ತ ಸಹಾಯಕ ಕೃಷಿ ನಿರ್ದೇಶಕರಾದ ಡಾ. ಶೈಲಜಾ ಎ. ಎನ್ ಕಾರ್ಯಕ್ರಮವನ್ನು ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು.

ಅವರು ಮಾತನಾಡಿ, ಗುರುಗಳು ನಮ್ಮ ಜೀವನದ ಸರ್ವತೋಮುಖ ಬೆಳವಣಿಗೆಗೆ ಕಾರಣಿಭೂತರು. ಗುರುವನ್ನು ಸದಾ ನಾವು ಗೌರವ ಭಾವದಿಂದ ಕಾಣಬೇಕು. ಜೀವನದ ಮೌಲ್ಯಗಳನ್ನು ಕಲಿಸಿಕೊಡುವ ವ್ಯವಸ್ಥೆಯೊಂದಿಗೆ ಗುರು ಸದಾ ಕಾಲ ನಮ್ಮೊಡನೆ ಇದ್ದು ನಮ್ಮ ಏಳಿಗೆಯಲ್ಲಿ ಸಂತೋಷವನ್ನು ಕಾಣುತ್ತಾರೆ. ಪ್ರತಿಯೊಬ್ಬ ವಿದ್ಯಾರ್ಥಿಗೂ ನಾಯಕತ್ವದ ಗುಣಗಳ ಅರಿವು ಮುಖ್ಯ. ವಿದ್ಯಾರ್ಥಿ ಸಂಘವು ಶೈಕ್ಷಣಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಂಶಗಳನ್ನು ಕಲಿಸುತ್ತದೆ. ಶಿಕ್ಷಕರು ಸಾಹಿತ್ಯವನ್ನು ಓದುವ ಅಭಿರುಚಿ ಬೆಳೆಸಿಕೊಳ್ಳುವುದರಿಂದ ಜ್ಞಾನವನ್ನು ವಿನಿಮಯ ಮಾಡಿಕೊಳ್ಳಲು ಸಾಧ್ಯ ಎಂದು ಹೇಳುತ್ತಾ ತಮ್ಮ ಜೀವನದಲ್ಲಿ ಅನುಭವಿಸಿದ ಹಲವು ಘಟನೆಗಳನ್ನು ಹೇಳಿ, ತಮ್ಮ ಬದುಕಿಗೆ ಡಿವಿಜಿ ಅವರ ಮಂಕುತಿಮ್ಮನ ಕಗ್ಗ ಸ್ಫೂರ್ತಿ ಎಂದು ಸ್ವಾರಸ್ಯಕರವಾಗಿ ತಿಳಿಸಿದರು.

ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಂಶುಪಾಲ ಡಾ. ಸಂತೋಷ್ ಸಲ್ದಾನ್ಹ “ಪ್ರಪಂಚವೆಂಬುದು ಬಹು ದೊಡ್ಡ ಶಾಲೆ ಇದ್ದಂತೆ” ನಾವುಗಳು ನೈಜ ಜೀವನದ ಪಾಠಗಳನ್ನು ಪ್ರಪಂಚದ ಬೇರೆ ಬೇರೆ ಸನ್ನಿವೇಶದಲ್ಲಿ ಕಲಿಯುತ್ತೇವೆ
ಈ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳು ಬದುಕಿಗೆ ಬೇಕಾಗಿರುವ ಮೂಲ ಕೌಶಲ್ಯಗಳನ್ನು ಕಲಿಸಿಕೊಡುತ್ತವೆ. ಆದುದರಿಂದ ವಿದ್ಯಾರ್ಥಿ ಸಂಘ ಮತ್ತು ವಿಷಯವಾರು ಸಂಘಗಳ ಅಗತ್ಯತೆ ಇದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಉಪನ್ಯಾಸಕ ಮಂಜು ಆರ್ ಕಾರ್ಯಕ್ರಮ ಕುರಿತು ಪ್ರಾಸ್ತವಿಕ ಮಾತುಗಳಾಡಿದರು. ಪ್ರಾಂಶುಪಾಲರು ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣವಚನ ಬೋಧಿಸಿದರು.

ಕಾರ್ಯಕ್ರಮದಲ್ಲಿ ಉಪನ್ಯಾಸಕರಾದ ವಿದ್ಯಾಶ್ರೀ ಅನುಷಾ, ಆದ್ಯ,ವೀಕ್ಷಿತ ಹಾಗೂ ಬೋಧಕೇತರ ವರ್ಗದವರು ಮತ್ತು ಡಿ.ಎಡ್ ಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

ಪ್ರಶಿಕ್ಷಣಾರ್ಥಿಗಳಾದ ದೀಪ ಮುಖ್ಯ ಅತಿಥಿ ಪರಿಚಯಿಸಿ, ಚಿಂಚನ ಬಳಗ ಪ್ರಾರ್ಥಿಸಿ , ವಿದ್ಯಾರ್ಥಿ ನಾಯಕಿ ರಂಝಿಯಾ ಸ್ವಾಗತಿಸಿ, ಉಪ ನಾಯಕಿ ರಂಝಿನಾ ವಂದಿಸಿ, ರಂಜಿನಿ ಹಾಗೂ ಸತ್ಯನಾರಾಯಣ ಕಾರ್ಯಕ್ರಮವನ್ನು ನಿರೂಪಿಸಿದರು.,

Related posts

ಮುಳಿಯ ಜ್ಯುವೆಲ್ಸ್‌ನಲ್ಲಿ ಗ್ರಾಹಕರ ಬೇಡಿಕೆ ಮೇರೆಗೆ ಅ.15 ರವರೆಗೆ ಡೈಮಂಡ್ ಫೆಸ್ಟ್ ಅವಧಿ ವಿಸ್ತರಣೆ: ಇಂದಿನಿಂದ ಚಿನ್ನೋತ್ಸವ ಪ್ರಾರಂಭ, ರೂ.20 ಸಾವಿರದ ಡೈಮಂಡ್ ಖರೀದಿಸಿ 5 ಕಾರು ಗೆಲ್ಲುವ ಸುವರ್ಣವಕಾಶ

Suddi Udaya

ಕುವೆಟ್ಟು :ಶ್ರೀ ಗುರುನಾರಾಯಣ‌ ಸ್ವಾಮಿ ಸೇವಾ‌ ಸಂಘ ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ, ಕುವೆಟ್ಟು ಗ್ರಾಮ ಸಮಿತಿಯಿಂದ  ಗುರು ಪೂಜೆ ಹಾಗೂ ಸಾರ್ವಜನಿಕ ಶನೈಶ್ಚರ ಪೂಜೆ

Suddi Udaya

ಕೊಕ್ಕಡ: ಮುಂಡೂರುಪಳಿಕೆ ಸ.ಕಿ.ಪ್ರಾ. ಶಾಲೆಯಲ್ಲಿ 78ನೇ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕಡಿರುದ್ಯಾವರ: ಕಾನರ್ಪ ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಲ್ಲಿ ಅಂತರಾಷ್ಟ್ರೀಯ ಆರೋಗ್ಯ ದಿನದ ಆಚರಣೆ

Suddi Udaya

ಚಾರುಕೀರ್ತಿಭಟ್ಟಾರಕ ಸ್ವಾಮೀಜಿಯವರಿಂದ “ರತ್ನತ್ರಯ ಸಿದ್ಧಿಸೋಪಾನ” ಶಾಸ್ತ್ರದಾನ ಕೃತಿ ಬಿಡುಗಡೆ

Suddi Udaya
error: Content is protected !!