23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉರುವಾಲು ಶ್ರೀ ವಿಘ್ನೇಶ್ವರ ಭಜನಾ ಮಂಡಳಿಯಲ್ಲಿ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜೆ

ಉರುವಾಲು: 10 ನೇ ವರ್ಷದ ಶ್ರೀ ವರಮಹಾಲಕ್ಷ್ಮಿ ವ್ರತ ಪೂಜಾ ಕಾರ್ಯಕ್ರಮವು ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಕಿಮಾರು ಇಲ್ಲಿ ನಡೆಯಿತು.

ಬೆಳಗ್ಗೆ ವರಮಹಾಲಕ್ಷ್ಮಿ ಕಲಶ ಪ್ರತಿಷ್ಠೆ ಹಾಗೂ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ಕಾರಿಂಜ ಬಾಕಿಮಾರು ಇವರಿಂದ ಭಜನಾ ಕಾರ್ಯಕ್ರಮ ನಡೆಯಿತು.


ವರಮಹಾಲಕ್ಷ್ಮಿ ಪೂಜೆ ಮಾಡುವುದು ನಮ್ಮೆಲ್ಲರಲ್ಲಿ ಒಂದು ಒಗ್ಗಟ್ಟಿನ ಭಾವನೆ ಬರುತ್ತದೆ.ಮನಸ್ಸಿಗೆ ಶಾಂತಿ, ನೆಮ್ಮದಿ, ಆರೋಗ್ಯ ಕೂಡ ‌ಹೆಚ್ಚಾಗುತ್ತದೆ, ಧಾರ್ಮಿಕತೆ ಹಾಗೂ ಸಂಸ್ಕೃತಿ ಬೆಳೆಯುತ್ತಿದೆ. ವರ್ಷಂಪ್ರತಿ ನಡೆಯುವ ಈ ಪೂಜೆಯನ್ನು ನಿಲ್ಲಿಸದೇ ಪ್ರತಿ ವರ್ಷ ಮಾಡುತ್ತಾ ಬರಬೇಕು ಎಂದು ಕಾರ್ಯಕ್ರಮದ ಧಾರ್ಮಿಕ ಭಾಷಣಕಾರರಾಗಿ ನೆಲ್ಲಿಕಟ್ಟೆ ಅಂಬಿಕಾ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕ ವಿಷ್ಣು ಪ್ರದೀಪ್ ನಿಡ್ಡಾಜೆ ಹೇಳಿದರು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಮತಿ ಗಿರಿಜ ಉದ್ಯ, ವಹಿಸಿದ್ದರು.ಇದೇ ಸಂದರ್ಭದಲ್ಲಿ ಉಪನ್ಯಾಸಕ ವಿಷ್ಣು ಪ್ರದೀಪ್ ನಿಡ್ಡಾಜೆ, ಪ್ರಗತಿಪರ ಕೃಷಿಕರಾದ ದಾಸಪ್ಪ ಗೌಡ ಕೋಡಿಯಡ್ಕ ಹಾಗೂ ವರಮಹಾಲಕ್ಷ್ಮಿ ಪೂಜಾ ಸಮಿತಿಯ ಸದಸ್ಯೆ ಶ್ರೀಮತಿ ಶಶಿಪ್ರಭಾ ಪೆದಮಲೆ ಇವರನ್ನು ಸನ್ಮಾನಿಸಲಾಯಿತು.

ವೇದಿಕೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯೆ ಶ್ರೀಮತಿ ಉಮಾವತಿ, ವಿಘ್ನೇಶ್ವರ ಭಜನಾ ಮಂಡಳಿ ಅಧ್ಯಕ್ಷ ಗೋಪಾಲಕೃಷ್ಣ ಗೌಡ ನೀನಿ, ಕೊರಿಂಜ ಪಂಚಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ, ಶ್ರೀ ಕೃಷ್ಣ ಸೇವಾ ಸಮಿತಿಯ ಅಧ್ಯಕ್ಷಹೇಮಂತ ಸಿ‌ ಚೆಂಡೆತ್ತಿಮಾರು ಉಪಸ್ಥಿತರಿದ್ದರು.

ಯಶ್ವಿ‌ ಮತ್ತು ಪಲ್ಲವಿ ಪ್ರಾರ್ಥಿಸಿ, ದಿನೇಶ ನಾಯ್ಕ ನೀನಿ ಸ್ವಾಗತಿಸಿ, ಪ್ರದೀಪ್ ನಾಯ್ಕ ಆನಡ್ಕ ನಿರೂಪಿಸಿ , ತೇಜಸ್ವಿನಿ ಕೋಡಿ ಧನ್ಯವಾದವಿತ್ತರು. ವರಮಹಾಲಕ್ಷ್ಮೀ ಪೂಜೆಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Related posts

ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಕೈಗಾರಿಕಾ ಅಧ್ಯಯನ ಪ್ರವಾಸ

Suddi Udaya

ಮಡಂತ್ಯಾರು ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಅಂತರ್ ಕಾಲೇಜು ಮಟ್ಟದ ಸ್ಪರ್ಧೆ: ವಿದ್ವತ್ ಪಿ.ಯು ಕಾಲೇಜಿನ ಕಾಮರ್ಸ್ ವಿಭಾಗದ ವಿದ್ಯಾರ್ಥಿಗಳ ಅಮೋಘ ಸಾಧನೆ

Suddi Udaya

ನಿಡ್ಲೆ ಹಾಗೂ ಪಟ್ರಮೆಯಲ್ಲಿ ಕಾಡಾನೆ ಪ್ರತ್ಯಕ್ಷ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯ ಕಬ್ ಹಾಗೂ ಬುಲ್ ಬುಲ್ ವಿದ್ಯಾರ್ಥಿಗಳಿಂದ ಪರಿಸರ ದಿನಾಚರಣೆ

Suddi Udaya

ಮುಂಬೈನ ಡೊಂಬಿವಿಲಿನಲ್ಲಿ ನಡೆದ ಶಾರದೋತ್ಸವ ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಭಕ್ತಿಹೆಜ್ಜೆ ಬಳಗದ ಭಜನಾ ಮಂಡಳಿಯ ಭಜಕರಿಂದ ಭಜನಾ ಸೇವೆ

Suddi Udaya
error: Content is protected !!